ವಿಟ್ಲ

ಮಕ್ಕಳು ಬರೆದದ್ದನ್ನು ಹಿರಿಯರು ಓದಬೇಕು

ವಿಟ್ಲ ವರದಿ: www.bantwalnews.com

ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಮಕ್ಕಳಲ್ಲಿ ಸಾಹಿತ್ಯ ಪ್ರವೃತ್ತಿ ಬೆಳೆಸಬೇಕು. ಮಕ್ಕಳು ಬರೆದ ಸಾಹಿತ್ಯವನ್ನು ಹಿರಿಯರು ಓದಬೇಕು. ಇದರಿಂದ ಮಕ್ಕಳ ಮನಸ್ಸು ಅರ್ಥವಾಗಲು ಸಾಧ್ಯವಾಗುತ್ತದೆ ಎಂದು ಚಿಂತಕ, ಸಾಹಿತಿ ಅರವಿಂದ ಚೊಕ್ಕಾಡಿ ಹೇಳಿದರು.

ಪೆರುವಾಯಿಯಲ್ಲಿ ಶನಿವಾರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮಕ್ಕಳ ಲೋಕ ಆಶ್ರಯದಲ್ಲಿ ನಡೆದ ೧೪ನೇ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ವೀಕ್ಷಿತ, ಸಾಹಿತ್ಯದಲ್ಲಿ ಮಾತು, ಓದು, ಬರಹ ಇರಲೇಬೇಕು. ಕಲೆ ಸಾಹಿತ್ಯ, ಸಂಗೀತ ಮೊದಲಾದವುಗಳಲ್ಲಿ ಸಾಹಿತ್ಯ ಇನ್ನೂ ಜೀವಂತವಾಗಿದೆ. ಸಾಹಿತ್ಯ ಸಮ್ಮೇಳನ ಎಂಬುದು ಒಂದು ಸಾಂಸ್ಕೃತಿಕ ಹಬ್ಬವಾಗಿದೆ. ಸಾಹಿತ್ಯದ ಬಗ್ಗೆ ಅರಿವು ಮೂಡಿಸುವ ಒಂದು ಶೈಕ್ಷಣಿಕ ಜಾತ್ರೆಯಾಗಿದೆ ಎಂದರು.

 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿ ಅವರು ಮಕ್ಕಳಲ್ಲಿ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಅಭಿಮಾನ ಮೂಡಿಸಲು ಇಂತಹ ಸಾಹಿತ್ಯ ಸಮ್ಮೇಳನಗಳು ಪೂರಕವಾಗಿದೆ ಎಂದರು.

ಬಂಟ್ವಾಳ ತಾಲ್ಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ ಮೋಹನ ರಾವ್ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣಗೈದರು. ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಲ್ಫ್ ಡಿಸೋಜ ಅವರು ಮೆರವಣಿಗೆ ಉದ್ಘಾಟಿಸಿದರು. ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕ ಸಚಿನ್ ಕನ್ನಡ ಧ್ವಜಾರೋಹಣಗೈದರು. ಹರ್ಷಕೃಷ್ಣ ಅಡ್ವಾಯಿ ನೂತನ ಶಾಲಾ ಕಟ್ಟಡ ಉದ್ಘಾಟಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಸಾದ್, ಸ್ವಾಗತ ಸಮಿತಿ ಗೌರವಾಧ್ಯಕ್ಷೆ ಸವಿತಾ ಎಸ್ ಭಟ್ ಅಡ್ವಾಯಿ, ಶಾಲಾ ಮುಖ್ಯ ಶಿಕ್ಷಕ ಕುಂಞನಾಯ್ಕ, ಪೈವಳಿಕೆ ಸರ್ಕಾರಿ ಹೈಯರ್ ಸೆಕೆಂಡರಿ ಸ್ಕೂಲ್ ವಿದ್ಯಾರ್ಥಿ ಮೇಧ ನಾಯರ್ಪಲ್ಲ ಉಪಸ್ಥಿತರಿದ್ದರು.

ಮಕ್ಕಳ ಲೋಕದ ಅಧ್ಯಕ್ಷ ಮಹಾಬಲ ಭಟ್ ನೆಗಳಗುಳಿ ಪ್ರಸ್ತಾವನೆಗೈದರು. ಮುರುವ ಶಾಲೆಯ ವಿದ್ಯಾರ್ಥಿನಿ ಪ್ರಣತಿ ಸ್ವಾಗತಿಸಿದರು. ನೀರ್ಕಜೆ ಶಾಲೆಯ ವಿದ್ಯಾರ್ಥಿ ಅರುಣ್ ವಂದಿಸಿದರು. ಪೆರುವಾಯಿ ಶಾಲೆಯ ವಿದ್ಯಾರ್ಥಿನಿ ಅನುಪ ಸಿಲ್ವಿಯಾ ಮತ್ತು ತಂಡ ನುಡಿಗೀತೆ ಹಾಡಿದರು. ನಿಶ್ಮಿತ ವಿ.ಜಿ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts