ಬಂಟ್ವಾಳ

ವಿವೇಕಾನಂದರು ನಮಗೆ ಆದರ್ಶರಾಗಲಿ: ಡಾ. ಸುಬ್ರಹ್ಮಣ್ಯ ಭಟ್

www.bantwalnews.com

ಬಂಟ್ವಾಳ ವರದಿ: ಭಾರತೀಯ ಸಂಸ್ಕೃತಿಯನ್ನು ವಿದೇಶಿಯರು ಮೆಚ್ಚುವಂತೆ ಮಾಡಿದ ವೀರ ಸನ್ಯಾಸಿ ವಿವೇಕಾನಂದರು ನಮಗೆ ಆದರ್ಶರಾಗಬೇಕು ಮತ್ತು ಅವರ ಸಂದೇಶಗಳು ನಮ್ಮ ದಾರಿ ದೀಪಗಳಾಗಬೇಕು ಎಂದು ನರಿಕೊಂಬುವಿನ ವೈದ್ಯರಾದ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು.

ಜಾಹೀರಾತು

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪೌಢಶಾಲೆ ಶಂಭೂರು ಇಲ್ಲಿ ಅಳುಪ ಸಮಾಜ ವಿಜ್ಞಾನ ಸಂಘ, ಜೇಸಿಐ ಜೋಡುಮಾರ್ಗ ನೇತ್ರಾವತಿಯ ಯುವಜೇಸಿ ವಿಭಾಗ, ಇಂಟರ್‍ಯಾಕ್ಟ್ ಕ್ಲಬ್, ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಆಶ್ರಯದಲ್ಲಿ ನಡೆದ ಯುವ ದಿನಾಚರಣೆಯ ಕಾರ್ಯಕ್ರಮದಲ್ಲಿ  ಮಾತನಾಡುತ್ತಿದ್ದರು.

ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಫೂರ್ತಿಯನ್ನು ನೀಡಿದ, ದೇಶದ ಬಗ್ಗೆ ಚಿಂತಿಸಿದವರು ವಿವೇಕಾನಂದರು ಎಂದು ಅವರು ತಿಳಿಸಿದರು.

ಜಾಹೀರಾತು

ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ ವಹಿಸಿದ್ದರು. ಸಹಶಿಕ್ಷಕರಾದ ಸುಜಾತಾ, ಸದಾಶಿವ ನಾಯಕ್, ಜಿನ್ನಪ್ಪ ಜಾಲ್ಸೂರು, ಭಾರತಿ, ವರಮಹಾಲಕ್ಷ್ಮಿ, ವಿದ್ಯಾರ್ಥಿ ನಾಯಕ ಪವನ್ ರಾಜ್, ಅಳುಪ ಸಂಘದ ಅಧ್ಯಕ್ಷೆ ಪಾವನ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಹಾಗೂ ಜೇಸಿ ಜೇಸಿಐ ಜೋಡುಮಾರ್ಗ ನೇತ್ರಾವತಿಯ ಉಪಾಧ್ಯಕ್ಷ ಜೇಸಿ ಹರಿಪ್ರಸಾದ್ ಕುಲಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.  ಇಂಟರ್‍ಯಾಕ್ಟ್ ಅಧ್ಯಕ್ಷೆ ಶ್ರೀವಿದ್ಯಾ ಸ್ವಾಗತಿಸಿ, ಜೇಜೇಸಿ ಅಧ್ಯಕ್ಷ ರೋನಿತ್ ವಂದಿಸಿದರು.  ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ