ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಕಲ್ಲಡ್ಕದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ, ಹೈಮಾಸ್ಟ್ ದೀಪ ಉದ್ಘಾಟನೆ

www.bantwalnews.com Editor: Harish Mambady

ಜಾಹೀರಾತು

ಕಲ್ಲಡ್ಕ ವರದಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಡಾ.ಪ್ರಭಾಕರ ಭಟ್  ಕಲ್ಲಡ್ಕ ಅವರ ನೇತೃತ್ವದಲ್ಲಿ ಸಂಕ್ರಾಂತಿಯ ದಿನವಾದ ಸೋಮವಾರ, ಕಲ್ಲಡ್ಕದ ಶ್ರೀರಾಮ ಮಂದಿರದಲ್ಲಿ  43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ, ಹೈಮಾಸ್ಟ್ ದೀಪ ಉದ್ಘಾಟನೆ ಮತ್ತು ಮಂದಿರದ ಲಿಫ್ಟ್ ಉದ್ಘಾಟನೆ ನಡೆಯಿತು.

ಈ ಸಂದರ್ಭ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, ಪ್ರಭಾಕರ ಎಂದರೆ ಬೆಳಕು ನೀಡುವವರು. ಕಲ್ಲಡ್ಕ ಡಾ. ಪ್ರಭಾಕರ ಭಟ್ ತಮ್ಮ ಹೆಸರಿನಂತೆ ಸಮಾಜಕ್ಕೆ ಬೆಳಕು ನೀಡುವ ಕಾರ್ಯವನ್ನು ಮಾಡುತ್ತಿದ್ದು, ಅವರಿಗೆ ಯಾವುದೇ ಆಪತ್ತು ಬಾರದೇ ಇರಲಿ ಎಂದು ಆಶೀರ್ವದಿಸಿದರು. ಅಯೋಧ್ಯೆಯಲ್ಲಿ ರಾಮಮಂದಿರ ಆಗದೆ ನಮಗೆ ವಿಶ್ರಾಂತಿ ಇಲ್ಲ ಎಂದ ಅವರು, ಶ್ರೀರಾಮನ ಸೇವೆ ಮಾಡಲು ಕಟಿಬದ್ಧರಾಗಿ ವಿಶೇಷ ಪ್ರಾರ್ಥನೆ ಮಾಡಿರಿ. ಶ್ರೀರಾಮನ ಸೇವಕರಾಗಿ ಹನುಮಂತನಂತೆ ಸದಾ ದುಡಿಯಿರಿ ಎಂದು ಭಕ್ತರಿಗೆ ಸಂದೇಶ ನೀಡಿದರು.

ಈ ಸಂದರ್ಭ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ನಾರಾಯಣ ಸೋಮಯಾಜಿ, ಮಂದಿರದ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ಕ.ಕೃಷ್ಣಪ್ಪ, ದಿನೇಶ್ ಅಮ್ಟೂರು, ಸುಜಿತ್ ಕೊಟ್ಟಾರಿ ಮತ್ತಿತರರು ಉಪಸ್ಥಿತರಿದ್ದರು. ಕಶೆಕೋಡಿ ಸೂರ್ಯನಾರಾಯಣ ಭಟ್ ನೇತೃತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ಚೆನ್ನಪ್ಪ ಕೋಟ್ಯಾನ್ ಸ್ವಾಗತಿಸಿದರು. ಕ.ಕೃಷ್ಣಪ್ಪ ವಂದಿಸಿದರು. ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮುನ್ನ ಹೈಮಾಸ್ಟ್ ದೀಪವನ್ನು ಶ್ರೀಗಳು ಉದ್ಘಾಟಿಸಿದರು. ಕಲ್ಲಡ್ಕದಾದ್ಯಂತ ಪೊಲೀಸರು ವಿಶೇಷ ಬಂದೋಬಸ್ತ್ ಏರ್ಪಡಿಸಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಕಲ್ಲಡ್ಕದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ, ಹೈಮಾಸ್ಟ್ ದೀಪ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*