ಕಾರಂಬಡೆ ಶ್ರೀ ಮಹಮ್ಮಾಯಿ ದೇವಾಲಯದ ಬಾಲಾಲಯ ಪ್ರತಿಷ್ಠೆ

www.bantwalnews.com

ಬಂಟ್ವಾಳ: ಇಲ್ಲಿನ ಕಸಬಾ ಗ್ರಾಮದಲ್ಲಿರುವ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರವನ್ನು ಪುನರ್ ನಿರ್ಮಿಸಲು ಸಂಕಲ್ಪಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಜ.೨೦ರಂದು ಬಾಲಾಲಯ ಪ್ರತಿಷ್ಠೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಹರೀಶ್ ಕೋಟ್ಯಾನ್ ತಿಳಿಸಿದ್ದಾರೆ.       ಸೋಮವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.19ರಂದು ವಿವಿಧ ವೈಧಿಕ ಕಾರ‍್ಯಕ್ರಮಗಳು ನಡೆಯಲಿದೆ ಎಂದರು.
ಜ. 20ರಂದು ಬೆಳಿಗ್ಗೆ  ೮-೩೨ಕ್ಕೆ  ಶ್ರೀ ಮಹಮ್ಮಾಯಿ ದೇವರ ಬಾಲಾಲಯ ಪ್ರತಿಷ್ಠೆ, ಐಕ್ಯಮತ್ಯ ಹೋಮ ಮತ್ತು ೧೦೮ಕಾಯಿ ಗಣಯಾಗ ನಡೆಯಲಿದ್ದು,  ಬಳಿಕ ಶಾಸಕ ರಾಜೇಶ್ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ.  ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶ್ರೀರ್ವಚನ ನೀಡುವರು. ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ದೀಪ ಪ್ರಜ್ವಲನ ಮಾಡುವರು.  ಮಾಜಿ ಸಚಿವ ಬಿ.ರಮಾನಾಥ ರೈ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸುವರು. ಜ್ಯೋತಿಷ್ಯ ವಿದ್ವಾನ್ ಸತೀಶ್ ಪಣಿಕ್ಕರ್, ಪುರೋಹಿತರಾದ ಕೇಶವ ಶಾಂತಿ ನಾಟಿ, ಉಧ್ಯಮಿ ಸಂತೋಷ್ ಕುಮಾರ್ ಕೊಟ್ಟಿಂಜ, ಶ್ರೀ ಕ್ಷೇ. ಧ.ಗ್ರಾ. ಯೋ.ಯ ಬಂಟ್ವಾಳ ಯೋಜನಾಧಿಕಾರಿ ಜಯಾನಂದ್, ಪುರಸಭಾ ಸದಸ್ಯರಾದ ವಾಸು ಪೂಜಾರಿ ಲೊರೆಟ್ಟೊ, ಮೀನಾಕ್ಷಿ, ಗಂಗಾಧರ ಪೂಜಾರಿ, ಜನಾರ್ಧನ ಚೆಂಡ್ತಿಮಾರು, ದೇವಕಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಪುನರ್‌ನಿರ್ಮಾಣ ಸಂಕಲ್ಪ:   
 ಬಂಟ್ವಾಳ ಕಸಬಾ ಗ್ರಾಮದ ಕಾರಂಬಡೆ ಎಂಬಲ್ಲಿರುವ ಪ್ರಕೃತಿ ರಮಣೀಯ ಹಚ್ಚಹಸಿರ ಸುಂದರ ಪರಿಸರದಲ್ಲಿರುವ ಶ್ರೀ ಮಹಮ್ಮಾಯಿ ಕ್ಷೇತ್ರವು ಭಕ್ತರ ಇಷ್ಠಾರ್ಥ ಸಿದ್ಧಿಸುವ ಪುಣ್ಯಕ್ಷೇತ್ರವಾಗಿ ಪ್ರಸಿದ್ಧಿ ಪಡೆದಿದೆ. ಕ್ಷೇತ್ರದಲ್ಲಿ ಶ್ರೀ ಮಹಾಮ್ಮಾಯಿಯೊಂದಿಗೆ ಶ್ರೀ ಗಣಪತಿ , ಶ್ರೀ ಗುರು, ಶ್ರೀ ನಾಗಬ್ರಹ್ಮ, ರಕ್ತೇಶ್ವರೀ, ಗುಳಿಗ, ಮಹಾಮ್ಮಾಯಿ ಗುಳಿಗ, ಕಾಲಭೈರವ, ಕಲ್ಲುರ್ಟಿ, ಪಂಜುರ್ಲಿ, ಧೂಮಾವತಿ, ಬಂಟ, ಮಾಡಕೊರತಿ, ಕುಪ್ಪೆಟ್ಟು ಪಂಜುರ್ಲಿ, ಮಂತ್ರದೇವತೆ, ಸತ್ಯದೇವತೆ, ಸಂಕೊಲೆ ಗುಳಿಗ, ರಾಹುಗುಳಿಗ, ಕೊರಗಜ್ಜ ಮೊದಲಾದ ದೈವಗಳ ಸಾನಿಧ್ಯವಿದೆ ಎಂದರು.
ಸಿಡುಬು ಮೊದಲಾದ ಅಂಟುರೋಗಗಳು, ಜಾನುವಾರು ರೋಗಗಳು, ಕಷ್ಟಕಾರ್ಪಣ್ಯಗಳ ನಿವಾರಣೆ ಸಹಿತ ವಿವಾಹ ಸಂಬಂಧ, ಸಂತಾನ ಭಾಗ್ಯ ಕೂಡಿ ಬರುವರೇ ಭಕ್ತಾದಿಗಳು ಈ ಕ್ಷೇತ್ರಕ್ಕೆ ಹರಕೆ ಸಲ್ಲಿಸಿ ತಮ್ಮ ಇಷ್ಠಾರ್ಥಗಳನ್ನು ಸಿದ್ಧಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ದೇವಿಗೆ ನಿತ್ಯ ಪೂಜೆ, ವಿಶೇಷ ಪೂಜೆಗಳು, ಕಾಳಬೈರವನಿಗೆ ಕೋಳಿ-ಕುರಿ ಬಲಿಗಳ ಸೇವೆ, ಮಹಾನವಮಿಯ ಒಂಬತ್ತು ದಿನ ವಿಶೇಷ ಉತ್ತವ, ಮಾರಿಪೂಜೆ, ರಾಶಿಪೂಜೆಗಳು ವಿಧಿವತ್ತಾಗಿ ನಡೆದುಕೊಂಡು ಬರುತ್ತಿದೆ ಎಂದು ವಿವರಿಸಿದರು.  ಕ್ಷೇತ್ರದಲ್ಲಿ ನಡೆದಿರುವ ಅಷ್ಟಮಂಗಳ ಪ್ರಶ್ನೆಯಲ್ಲಿ ಕಂಡು ಬಂದ ಪ್ರಕಾರ ಶ್ರೀ ಕ್ಷೇತ್ರವು 800 ವರ್ಷಗಳ ಇತಿಹಾಸವಿರುವ ಅತ್ಯಂತ ಪುರಾತನವಾದ ಕಾರಣೀಕ ಕ್ಷೇತ್ರವಾಗಿದ್ದು ಶಿಥಿಲಾವಸ್ಥೆಯಲ್ಲಿರುವ ಈ ಕ್ಷೇತ್ರವನ್ನು ಸುಮಾರು 2.50 ಕೋ.ರೂ.ವೆಚ್ಚದಲ್ಲಿ  ಪುನರ್‌ನಿರ್ಮಿಸಲು ಸಂಕಲ್ಪಿಸಲಾಗಿದ್ದು, ಭಕ್ತರ ಸಹಕಾರವನ್ನು ಯಾಚಿಸಲಾಗಿದೆ ಎಂದರು.  ಅನುವಂಶಿ ಆಡಳಿತ ಮೊಕ್ತೇಸರ ಅರುಣ್ ಕುಮಾರ್ ,ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳಾದ ನಾಗೇಶ್ ದರ್ಬೆ,ಜಯಶಂಕರ್ ಕಾನ್ಸಾಲೆ,ಭಾಸ್ಕರ ಅಜೆಕಲ, ಮಚ್ಚೇಂದ್ರ ಸಾಲಿಯಾನ್,  ಗೋಪಾಲ ಅಂಚನ್ ಮೊದಲಾದವರು ಸುದ್ದಿಗೋಷ್ಠಿಯಲ್ಲಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾರಂಬಡೆ ಶ್ರೀ ಮಹಮ್ಮಾಯಿ ದೇವಾಲಯದ ಬಾಲಾಲಯ ಪ್ರತಿಷ್ಠೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*