ವಿಠಲ ವಿದ್ಯಾ ಸಂಘ-ಹಳೆ ವಿದ್ಯಾರ್ಥಿ ಸಂಘದಿಂದ ಹಳೆ ವಿದ್ಯಾರ್ಥಿಗಳ ಸಕುಟುಂಬ ಸ್ನೇಹಮಿಲನ ಜ.20ರಂದು

www.bantwalnews.com Editor: Harish Mambady

ಜಾಹೀರಾತು

 

ವಿಟ್ಲದ ವಿಠಲ ವಿದ್ಯಾ ಸಂಘದ ಹಿರಿಯ ವಿದ್ಯಾರ್ಥಿಗಳನ್ನು ಒಂದೇ ಸೂರಿನಡಿ ಸೇರಿಸಿ ಸಕುಟುಂಬ ಸ್ನೇಹಮಿಲನ2019 ಕಾರ್ಯಕ್ರಮವನ್ನು ಇದೇ 20ರಂದು ಬೆಳಿಗ್ಗೆ ನಡೆಯಲಿದೆ. ವಿಠಲ ವಿದ್ಯಾ ಸಂಘದ ಸಂಚಾಲಕ ಎಲ್.ಎನ್ ಕೂಡೂರು ವಿಟ್ಲದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿವರ ನೀಡಿದರು.

ವಿಟ್ಲ ವರದಿ: ವಿಠಲ ಪ್ರೌಢ ಶಾಲೆ, ವಿಠಲ ಪದವಿಪೂರ್ವ ಕಾಲೇಜು, ವಿಠಲ ಸುಪ್ರಜಿತ್ ಐಟಿಐ ಹಿರಿಯ ವಿದ್ಯಾರ್ಥಿಗಳು, ತಮ್ಮ ಬದುಕು ರೂಪಿಸಿದ ನಿವೃತ್ತ ಶಿಕ್ಷಕ, ಶಿಕ್ಷಕೇತರ ಉಪಸ್ಥಿತಿಯಲ್ಲಿ ದಿನಾಪೂರ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಜಾಹೀರಾತು

ವಿಟ್ಲ ಅರಮನೆಯ ರವಿವರ್ಮ ಕೃಷ್ಣರಾಜರು ಸುಮಾರು 5 ಎಕರೆಯಷ್ಟು ಸ್ಥಳದಾನ ಮಾಡಿದ್ದರು. ಅವರ ಅಧ್ಯಕ್ಷತೆಯಲ್ಲಿ ವಿಠಲ ವಿದ್ಯಾ ಸಂಘ ಆರಂಭಗೊಂಡಿತ್ತು. ದೇವಸ್ಯ ನಾರಾಯಣ ಭಟ್ಟರು ಸಂಚಾಲಕರಾಗಿ ಮುನ್ನಡೆಸಿದ್ದು, ಇವರಿಗೆ ಪ್ರೇರಕ ಶಕ್ತಿಯಾಗಿದ್ದ ಜಿಲ್ಲಾ ಸಹಕಾರಿ ಪಿತಾಮಹವೆನಿಸಿದ್ದ ಮೊಳಹಳ್ಳಿ ಶಿವರಾಯರು, ಪ್ರಥಮ ಮುಖ್ಯೋಪಾಧ್ಯಾಯರಾಗಿದ್ದ ಮಡಿಯಾಲ ನಾರಾಯಣ ಭಟ್ 1954 ರಲ್ಲಿ ಚೊಚ್ಚಲ ಎಸ್ಎಸ್ಎಲ್ಸಿ ತಂಡ ಹೊರ ತಂದಾಗಿನಿಂದ ವಿಠಲ ಹೈಸ್ಕೂಲ್ ಹಳೆ ವಿದ್ಯಾರ್ಥಿ ಸಂಘ ಹುಟ್ಟಿಕೊಂಡಿತ್ತು. ವಿಠಲ ಹೈಸ್ಕೂಲ್ ಹಳೆ ವಿದ್ಯಾರ್ಥಿ ಸಂಘದ ಪ್ರಥಮ ಅಧ್ಯಕ್ಷ, ಜಿಲ್ಲಾ ನಿವೃತ್ತ ನ್ಯಾಯಾಧೀಶ ಪದ್ಮನಾಭ ಕೆದಿಲಾಯ ಅವರ ಅಧ್ಯಕ್ಷತೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಕುಟುಂಬ ಮಿಲನ ಕಾರ್ಯಕ್ರಮ ಆಯೋಸಲಾಗಿದೆ. ಸದ್ಯ ಸಂಸ್ಥೆಯಲ್ಲಿ 1600 ವಿದ್ಯಾರ್ಥಿಗಳು  ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕ್ರೀಡೆ ಸೇರಿದಂತೆ ವಿವಿಧ ಚಟುವಟಿಕೆಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಬೆಳಿಗ್ಗೆ ಉಪಾಹಾರ ಹಾಗೂ ಸ್ನೇಹಮಿಲನ, ಬದುಕು ರೂಪಿಸಿದ ಹಿರಿಯರಿಗೆ ನಮನ ಸಲ್ಲಿಕೆ, ಸಾಧಕರ ಅನಿಸಿಕೆ, ಸಂವಾದ, ಭೋಜನದ ಬಳಿಕ ಮನರಂಜನಾ ಕಾರ್ಯಕ್ರಮ ಹಾಗೂ ಫನ್ ಗೇಮ್ಸ್ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಬೆಂಗಳೂರು ಸುಪ್ರಜಿತ್ ಎಂಜಿನಿಯರ್ ಲಿಮಿಟೆಡ್ ಆಡಳಿತ ನಿರ್ದೇಶಕ ಅಜಿತ್ ಕುಮಾರ್ ರೈ, ಬೆಂಗಳೂರು ಕೆಇಬಿ ನಿವೃತ್ತ ಎಂಜಿನಿಯರ್ ಪದ್ಮನಾಭ ಭಟ್, ಕನ್ನಡ ಚಲನಚಿತ್ರ ಸಂಗೀತ ನಿರ್ದೇಶಕ ವಿ ಮನೋಹರ್, ನಿವೃತ್ತ ಪ್ರಾಧ್ಯಾಪಕಿ ಡಾ. ಪಾರ್ವತಿ ಜಿ ಐತಾಳ್, ಮುಂಬಾಯಿ  ಮೆಝ್ಗಾನ್ ಡಾಕ್ ಶಿಪ್ ಬಿಲ್ಡರ್ಸ್ ನಿವೃತ್ತ ಜನರಲ್ ಮೆನೇಜರ್ ಅಲ್ಫೋನ್ಸ್ ಸಿಲೆಸ್ಟರ್ ಮಸ್ಕರೇಂಞಸ್, ಪಣಂಬೂರು ಪೊಲೀಸ್ ಇನ್ಸ್ಪೆಕ್ಟರ್ ರಫೀಕ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಕಾಲೇಜು ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿಪ್ರಕಾಶ್, ಸಂಚಲನ ಸಮಿತಿ ಗೌರವಾಧ್ಯಕ್ಷ ಎಚ್ ಸುಬ್ರಹ್ಮಣ್ಯ ಭಟ್, ಅಧ್ಯಕ್ಷ ರಾಧಾಕೃಷ್ಣ ನಾಯಕ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಠಲ ವಿದ್ಯಾ ಸಂಘ-ಹಳೆ ವಿದ್ಯಾರ್ಥಿ ಸಂಘದಿಂದ ಹಳೆ ವಿದ್ಯಾರ್ಥಿಗಳ ಸಕುಟುಂಬ ಸ್ನೇಹಮಿಲನ ಜ.20ರಂದು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*