ಬಂಟ್ವಾಳ

ಫೆ.15ರಂದು ಕುಮಾರ ಪಡ್ರೆ ಮತ್ತು ನಗ್ರಿ ಮಹಾಬಲ ರೈ ಅವರಿಗೆ ಬೊಂಡಾಲ ಪ್ರಶಸ್ತಿ ಪ್ರದಾನ

www.bantwalnews.com

ಕಟೀಲು ಮೇಳದ ಯಕ್ಷಗಾನ ಕಲಾವಿದ ಕುಮಾರ ಪಡ್ರೆ ಮತ್ತು ನಗ್ರಿ ಮಹಾಬಲ ರೈ  ಇವರಿಗೆ ಬೊಂಡಾಲ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಆಯೋಜಕರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಬೊಂಡಾಲದಲ್ಲಿ 14 ಮತ್ತು 15ರಂದು ನಡೆಯುವ ಎರಡು ದಿನಗಳ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಫೆ.15ರಂದು ಶ್ರೀ ದೇವಿ ಮಹಾತ್ಮೆ ಮತ್ತು ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಸಂಸ್ಮರಣೆ ಹಾಗೂ ಬೊಂಡಾಲ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ. ರಾತ್ರಿ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸುವರು. ಕಟೀಲ ಆನುವಂಶಿಕ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಆಶೀರ್ವಚನ ನೀಡುವರು. ಕಟೀಲು ಮೇಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ ಶೆಟ್ಟಿ, ಮಾಜಿ ಸಚಿವ ಬಿ.ರಮಾನಾಥ ರೈ, ಬೊಂಡಾಲ ಸೀತಾರಾಮ ಶೆಟ್ಟಿ ಮತ್ತು ಭಾಸ್ಕರ ರೈ ಕುಕ್ಕುವಳ್ಳಿ ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ. 14ರಂದು ಶಿವಪ್ರಭ ಪರಿಣಯ ಮತ್ತು ಭಸ್ಮಾಸುರ ಮೋಹಿನಿ ಯಕ್ಷಗಾನ ಬಯಲಾಟ ನಡೆಯುವುದು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.