ಜಿಲ್ಲಾ ಸುದ್ದಿ

ಅಡ್ಡಹೊಳೆ – ಬಿ.ಸಿ.ರೋಡ್ ಚತುಷ್ಪಥ: ಮೂಲಯೋಜನೆಯಂತೆ ಕಾಮಗಾರಿ – ನಳಿನ್ ಕುಮಾರ್ ಕಟೀಲ್

www.bantwalnews.com

ಬಂಟ್ವಾಳ ವರದಿ: ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಕಾಮಗಾರಿ ಮತ್ತೆ ಆರಂಭಗೊಳ್ಳಲಿದ್ದು, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಹಿಂದಿನ ಯೋಜನೆಯಂತೆಯೇ ಕಾಮಗಾರಿ ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸೂಚಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ೭೫ರ ಚತುಷ್ಪಥ ಕಾಮಗಾರಿ ಸಂದರ್ಭ ಸ್ಥಳೀಯರ ಬೇಡಿಕೆಯನ್ವಯ ಪ್ಲಾನ್ ನಲ್ಲಿ ಇದ್ದ ಕಲ್ಲಡ್ಕ ಫ್ಲೈಓವರ್ ಜೊತೆಗೆ ಹೆಚ್ಚುವರಿಯಾಗಿ ಮೇಲ್ಕಾರ್, ಪಾಣೆಮಂಗಳೂರು, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಸಮೀಪ ಫ್ಲೈಓವರ್ ನಿರ್ಮಿಸಲು ಅಂದಾಜಿಸಲಾಗಿತ್ತು. ಆದರೆ ಈ ಫ್ಲೈಓವರ್ ಗಳನ್ನು ಹೆಚ್ಚುವರಿಯಾಗಿ ನಿರ್ಮಿಸಬೇಕಾದರೆ ಮತ್ತೆ ಟೆಂಡರ್ ಪ್ರಕ್ರಿಯೆ ಸಹಿತ ಹಲವು ಸಮಸ್ಯೆಗಳು ಇರುವ ಕಾರಣ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಈ ಬೇಡಿಕೆಗಳನ್ನು ಕೈಬಿಟ್ಟು ಮೊದಲಿನ ಯೋಜನೆ ಪ್ರಕಾರವೇ ಕಾಮಗಾರಿ ನಿರ್ಮಿಸಲು ಸೂಚಿಸಿದರು. ಈ ಮಧ್ಯೆ ಕೆಲ ದಿನಗಳ ಕಾಲ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ವಿನಾ ಕಾರಣ ಟೀಕೆ ಮಾಡಿವೆ ಎಂದರು.

ಅಡ್ಡಹೊಳೆ – ಬಿ.ಸಿ.ರೋಡ್ ಚತುಷ್ಪಥ ಕಾಮಗಾರಿಯು ಮುಂದುವರಿಯುತ್ತಿದ್ದು, ಈ ಕುರಿತು ಯಾವುದೇ ಅನುಮಾನ ಬೇಡ ಎಂದು ನಳಿನ್ ಸ್ಪಷ್ಟಪಡಿಸಿದರು. ಪಂಪ್ ವೆಲ್ ಫ್ಲೈಓವರ್ ನಿರ್ಮಾಣ ಕಾಮಗಾರಿಯು ತಜ್ಞರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಇದು ಉದ್ಘಾಟನೆಗೆ ಸಿದ್ಧವಾಗಲಿದೆ ಎಂದು ನಳಿನ್ ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಫೆಬ್ರವರಿಯಲ್ಲಿ ಗಡ್ಕರಿ ಮಂಗಳೂರಿಗೆ:

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಂಗಳೂರಿಗೆ ಫೆಬ್ರವರಿ ಅಂತ್ಯದ ವೇಳೆಗೆ ಆಗಮಿಸಲಿದ್ದು, ಈ ಸಂದರ್ಭ ಪಂಪ್ ವೆಲ್ ಫ್ಲೈಓವರ್ ಉದ್ಘಾಟಿಸುವರು. ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಪರಿಶೀಲನೆ, ಕುಲಶೇಖರ – ಕಾರ್ಕಳ ಚತುಷ್ಪಥ ಕಾಮಗಾರಿಗೆ ಶಿಲಾನ್ಯಾಸ ಕಾಮಗಾರಿ ನೆರವೇರಲಿದೆ ಎಂದು ನಳಿನ್ ಹೇಳಿದರು.

ನಂ.1 ಕೊಟ್ಟದ್ದೇ ಮಾಧ್ಯಮಗಳು:

ರಮಾನಾಥ ರೈ ಅವರು ಜನರ ಕೈಯಲ್ಲಿ ಪರಾಭವಗೊಂಡವರು. ಈಗಲೂ ಅವರು ಮಂತ್ರಿ ಅಂದುಕೊಂಡಿದ್ದಾರೆ. ನಾನೆಲ್ಲೂ ನಂ.೧ ಸಂಸದ ಎಂದು ಹೇಳಿಲ್ಲ. ಪತ್ರಿಕೆಗಳು ಸರ್ವೇ ನಡೆಸುವ ಸಂದರ್ಭ ನನ್ನ ಕಾರ್ಯಕ್ರಮಗಳನ್ನು ಪರಿಶೀಲಿಸಿ ನಂ.೧ ಸಂಸದ ಎಂದು ಹೇಳಿದ್ದಾರೆ. ಆದರೆ ರಮಾನಾಥ ರೈ ಅವರು ಸೋಲಿನ ಹತಾಶೆಯಿಂದ ನನ್ನ ಕುರಿತು ಹೇಳುತ್ತಿದ್ದು, ಈ ಹೇಳಿಕೆಗಳಿಗೆ ಉತ್ತರಿಸದಿರುವುದೇ ಸೂಕ್ತ ಎಂದು ನಳಿನ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಗೆ ತನ್ನ ಕೊಡುಗೆ ಏನೆಂದು ರೈ ಅವರು ವಿವರಿಸಬೇಕಾಗಿಲ್ಲ ಎಂದರು. ಕೇಂದ್ರ ಸರಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವಿವಿಧ ಯೋಜನೆಗಳಿಗೆ ೨೦೧೪-೧೫ರಿಂದ ೨೦೧೮-೧೯ನೇ ಸಾಲಿಗೆ 1500 ಕೋಟಿ ರೂ ಬಿಡುಗಡೆಯಾಗಿದೆ ಎಂದು ನಳಿನ್ ಅಂಕಿ ಅಂಶಗಳಿರುವ ಮಾಹಿತಿಯ ಕೈಪಿಡಿಯನ್ನು ಒದಗಿಸಿದರು.

ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ,ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ,ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ,  ಪಕ್ಷದ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ,ಜಿ.ಆನಂದ,ಸುಲೋಚನಾ ಜಿ.ಕೆ.ಭಟ್,ರಾಧಾಕೃಷ್ಣ ರೈ ಬುಡಿಯಾರ್, ಮೋನಪ್ಪ ದೇವಸ್ಯ,ರಾಮದಾಸ್ ಬಂಟ್ವಾಳ,ಜನಾರ್ದನ ಬೊಂಡಾಲ,ದೇವಪ್ಪ ಪೂಜಾರಿ, ರಮಾನಾಥ ರಾಯಿ,ಪುರುಷೋತ್ತಮ ಶೆಟ್ಟಿ ವಾಮದಪದವು ಮೊದಲಾದವರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

18 hours ago