ಕಲ್ಲಡ್ಕ

ನೇತಾಜಿ ಸ್ಮೃತಿ – ಯೋಧರಿಗೆ ಸನ್ಮಾನ

www.bantwalnews.com Editor: Harish Mambady

ಜಾಹೀರಾತು

ಕಲ್ಲಡ್ಕ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನದ ದಾರಿ, ಹೋರಾಟ ಮತ್ತು ದೇಶಭಕ್ತಿಯ ಕುರಿತು ಮಾಹಿತಿ ನಾಡಿನ ಸಮಸ್ತ ಜನರಿಗೆ ದೊರಕಬೇಕು ಎಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಪದವಿ ಕಾಲೇಜು ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಹೇಳಿದರು.

ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 122 ನೇ ಜನ್ಮ ದಿನಾಚರಣೆ ಪ್ರಯುಕ್ತ ನೇತಾಜಿ ಯುವಕ ಮಂಡಲ ಕಲ್ಲಡ್ಕ ಆಶ್ರಯದಲ್ಲಿ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಸ್ಮೃತಿ ದಿನ ನೇತಾಜಿ ಸ್ಮೃತಿ ಭವನದಲ್ಲಿ ನಡೆಯಿತು. ಈ ಪ್ರಯುಕ್ತ ನುಡಿನಮನ ಸಲ್ಲಿಸಿದ ಅವರು ಯುವಪೀಳಿಗೆ ನೇತಾಜಿಯವರ ಅದಮ್ಯ ದೇಶಭಕ್ತಿಯಿಂದ ಪ್ರೇರೇಪ:ಣೆ ಹೊಂದಿ ರಾಷ್ಟ್ರದ ಗೌರವ ಕಾಪಾಡಲು ಶ್ರಮಿಸಬೇಕು ಎಂದರು.

ಈ ಸಂದರ್ಭ ನಿವೃತ್ತ ಸುಬೇದಾರ್ ಮೇಜರ್ ರಾಜೇಂದ್ರಾಜಿ ಕೆ.ಪಿ. ಕಲ್ಲಡ್ಕ ಅವರನ್ನು ಗೌರವಿಸಲಾಯಿತು. ಬಳಿಕ ಕಿರಣ್ ಕುಮಾರ್ ಗಾನಸಿರಿ ಕಲ್ಲಡ್ಕ ಕೇಂದ್ರದಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆಯನ್ನು ಬಿ.ಕೆ.ರಾಜ್ ನಂದಾವರ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಉದ್ಯಮಿ ರಾಜೇಂದ್ರ ಹೊಳ್ಳ ಭಾಗವಹಿಸಿದರು. ಗೌರವ ಅಧ್ಯಕ್ಷ ನಾಗೇಶ್ ಸ್ವಾಗತಿಸಿದರು ಯುವಕ ಮಂಡಲ ಅಧ್ಯಕ್ಷ ಧನುಷ್ ವಂದಿಸಿದರು. ಗೋಪಾಲ ಬಲ್ಯಾಯ ಕಲ್ಲಡ್ಕ  ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.