ಬಂಟ್ವಾಳ

ಸುಲಿಗೆ ಪ್ರಕರಣದ ಆರೋಪಿಗಳಿಬ್ಬರನ್ನು ಪತ್ತೆ ಹಚ್ಚಿದ ಬಂಟ್ವಾಳ ನಗರ ಪೊಲೀಸರು

www.bantwalnews.com

ಬಂಟ್ವಾಳ: ಬಂಟ್ವಾಳ ನೆರೆ ಪರಿಹಾರ ರಸ್ತೆಯಲ್ಲಿ 2018 ಅ.7ರಂದು ಮುಂಜಾನೆ ನಿಂತಿದ್ದ ಭಂಡಾರಿಬೆಟ್ಟು ನಿವಾಸಿ ಪ್ರವೀಣ್ ಎಂಬುವವರಿಗೆ ರಿಡ್ಜ್ ಕಾರಿನಲ್ಲಿ ಬಂದ ಆರೋಪಿಗಳು ಹಲ್ಲೆ ನಡೆಸಿ, ಮೊಬೈಲ್ ಸುಲಿಗೆಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಜಾಹೀರಾತು

ಪುದು ಗ್ರಾಮದ ಹತ್ತನೇ ಮೈಲುಗಲ್ಲು ನಿವಾಸಿ ಸಿರಾಜ್ ಯಾನೆ ಮಹಮ್ಮದ್ ಇಸ್ಮಾಯಿಲ್ (19) , ಶಾಕೀರ್ (18) ಬಂಧಿತರು.

ಇವರಿಂದ ಸುಲಿಗೆ ಗೈದ 25,ಸಾ- ರೂ ಮೌಲ್ಯದ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ ರಿಡ್ಜ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಎಸ್ . ಪಿ . ಲಕ್ಷ್ಮಿ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಎಎಸ್ಪಿ ಸೈದುಲ್  ಅದಾವತ್, ನಿರ್ದೇಶನದಂತೆ, ಬಂಟ್ವಾಳ ವೃತ್ತ ಪೊಲೀಸ್ ನಿರೀಕ್ಷಕರಾದ  ಟಿ.ಡಿ. ನಾಗರಾಜ್ ರವರ ನೇತೃತ್ವದಲ್ಲಿ, ಹಾಗೂ ಬಂಟ್ವಾಳ ನಗರ ಪೊಲೀಸ್ ಉಪ ನಿರೀಕ್ಷಕರಾದ ಚಂದ್ರಶೇಖರ್ , ಹರೀಶ್ ಎಂ.ಆರ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಗಳಾದ ಎ.ಎಸ್.ಐ ಸಂಜೀವ್, ಗಿರೀಶ್, ವಿವೇಕ, ಕುಮಾರ್, ನಜೀರ್, ಮಲ್ಲಿಕ್ , ರಾಘವೇಂದ್ರ  ಕಂಪ್ಯೂಟರ್ ವಿಭಾಗದ ಸಂಪತ್ , ದಿವಾಕರ್ ರವರು  ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.   .

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ