ಗುಡ್ಡೆಯಂಗಡಿ ಜನನಿಬಿಡ ಪ್ರದೇಶವಾಗಿದ್ದು, ವಾಹನ ಸಂಚಾರವು ಅಧಿಕವಾಗಿದೆ. ಇದರಿಂದ ಪಾದಚಾರಿಗೆ ನಡೆದಾಡಲು ಹಾಗೂ ಸ್ಥಳೀಯರಿಗೆ ರಸ್ತೆ ದಾಟಲು ತೊಂದರೆಯಾಗುತ್ತಿದೆ. ಅಲ್ಲದೆ, ಇತ್ತೀಚೆಗೆ ಇದೇ ಸ್ಥಳದಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರು ಧಾರುಣವಾಗಿ ಮೃತಪಟ್ಟಿದ್ದರು ಎಂದು ಸ್ಥಳೀಯ ನಿವಾಸಿ ಹಮೀದ್ ಸಲ್ಮಾನ್ ಆರೋಪಿಸಿದ್ದಾರೆ.
ಜಾಹೀರಾತು
ಅಪಘಾತ ತಡೆಯುವ ಹಿನ್ನೆಲೆಯಲ್ಲಿ ಇಲ್ಲಿ ವೈಜ್ಞಾನಿಕ ಹಂಪ್ಸ್ ನಿರ್ಮಿಸುವಂತೆ ಒತ್ತಾಯಿಸಿ ಸ್ಥಳೀಯರು ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಾ ಬಂದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಈ ಸಂಧರ್ಭದಲ್ಲಿ ಸ್ಥಳೀಯರಾದ ಶಹೀದ್, ಹಮೀದ್ ಸಲ್ಮಾನ್, ಸಾಧಿಕ್, ಅಮಾನುಲ್ಲ, ಇರ್ಫಾನ್, ಅಲ್ತಾಫ್, ಅಬ್ದುಲ್ ರಹಿಮಾನ್, ಅಷ್ಪಾಕ್, ಫಾರೂಕ್ ಮತ್ತಿತರು ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗುಡ್ಡೆಯಂಗಡಿ ರಸ್ತೆಗೆ ವೈಜ್ಞಾನಿಕ ಹಂಪ್ಸ್ ನಿರ್ಮಿಸುವಂತೆ ಒತ್ತಾಯಿಸಿ ಧರಣಿ"