ಕಲಾವಿದ ಪೆರ್ಮುದೆ ಜಯಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ

www.bantwalnews.com

Editor: Harish Mambady

ಜಾಹೀರಾತು

ಬಂಟ್ವಾಳ: ಬಿ.ಸಿ.ರೋಡಿನ ರಂಗೋಲ್ ಹೋಟೆಲ್ ಆವರಣದಲ್ಲಿ ಗುರುವಾರ ರಾತ್ರಿ ನಡೆದ ಶ್ರೀ ಹನುಮಗಿರಿ ಮೇಳದ ಯಕ್ಷಗಾನ ಪ್ರದರ್ಶನ ಮಹಾಕಲಿ ಮಗಧೇಂದ್ರ ಸಂದರ್ಭ, ಕಲಾವಿದ ಪೆರ್ಮುದೆ ಜಯಪ್ರಕಾಶ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಯಕ್ಷಮಿತ್ರರು ಕೈಕಂಬ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ, ಹವ್ಯಾಸಿ ಅರ್ಥಧಾರಿ ಸಂಕಪ್ಪ ಶೆಟ್ಟಿ ಅವರು ಜಯಪ್ರಕಾಶ ಶೆಟ್ಟಿ ಅವರನ್ನು ಸನ್ಮಾನಿಸಿದರು. ಪೆರ್ಮುದೆಯವರು ಸಣ್ಣ ವಯಸ್ಸಿನಲ್ಲೇ ಪ್ರೌಢ ಕಲಾವಿದರಾಗಿ ಹಿರಿಯ ಅನುಭವಿ ಕಲಾವಿದರೊಂದಿಗೆ ಸರಿಸಮಾನರಾಗಿ ಪ್ರದರ್ಶನ ನೀಡುತ್ತಿರುವುದು ಶ್ಲಾಘನೀಯ ಅವರ 28 ವರ್ಷಗಳ ಕಲಾಸೇವೆ ಮುಂದೆಯೂ ಯಶಸ್ವಿಯಾಗಿ ಸಾಗಲಿ ಎಂದು ಹಾರೈಸಿದರು. ಈ ಸಂದರ್ಭ ಮಾತನಾಡಿದ ಪೆರ್ಮುದೆ ಜಯಪ್ರಕಾಶ ಶೆಟ್ಟಿ, ನಾನು ಕಾಸರಗೋಡು ಜಿಲ್ಲೆಯವನಾದರೂ ಕನ್ನಡದ ನೆಲದಲ್ಲೇ ನನಗೆ ಹೆಚ್ಚು ಅಭಿಮಾನದ ಸನ್ಮಾನಗಳು ಸಂದಿವೆ. ಬಡತನದಲ್ಲಿದ್ದ ನಾನು ಅಪಹಾಸ್ಯಕ್ಕೆ ಗುರಿಯಾಗಿದ್ದೆ. ಇಂದು ಯಕ್ಷಗಾನ ಕ್ಷೇತ್ರ ದೊಡ್ಡ ಮನ್ನಣೆಯನ್ನು ನೀಡಿದೆ ಎಂದು ಹೇಳಿದರು.

ಜಾಹೀರಾತು

ಇದೇ ವೇಳೆ ಹಿರಿಯರಾದ ಜಯಂತ ಶೆಟ್ಟಿ, ಪುರಸಭೆ ಸದಸ್ಯ ರಾಮಕೃಷ್ಣ ಆಳ್ವ, ಯಕ್ಷಮಿತ್ರರು ಬಳಗದ ಕಿಶೋರ್, ಭುಜಂಗ ಸಾಲಿಯಾನ್, ಸದಾಶಿವ ಕೈಕಂಬ, ಶಂಕರ ಶೆಟ್ಟಿ ಉಪಸ್ಥಿತರಿದ್ದರು. ಕಿಶೋರ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲಾವಿದ ಪೆರ್ಮುದೆ ಜಯಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*