ಬಂಟ್ವಾಳ

ಸರಕಾರಿ ಕಚೇರಿಗೆ ಬರುವವರ ಮುಖದಲ್ಲಿ ಮಂದಹಾಸ ಮೂಡಿಸುವುದೇ ನಿಜವಾದ ದೇಶಸೇವೆ: ತಹಶೀಲ್ದಾರ್

www.bantwalnews.comEditor: Harish Mambady

ಬಂಟ್ವಾಳ: ಸಂವಿದಾನದತ್ತ ಸೌಲಭ್ಯಗಳನ್ನು ತಿಳಿದುಕೊಳ್ಳಬೇಕು. ಸರಕಾರಿ ಕಚೇರಿಗೆ ನಾನಾ ಸಮಸ್ಯೆ ಹೊತ್ತು ಬರುವ ಜನರ ಮುಖದಲ್ಲಿ ಮಂದಹಾಸ ಮೂಡಿಸುವುದೇ ನಿಜವಾದ ದೇಶ ಸೇವೆ ಈ ದೇಶದ ಪ್ರತಿಯೊಬ್ಬ ನಾಗರಿಕರು ಕೂಡ ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಹೇಳಿದರು.

ಜಾಹೀರಾತು

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬಂಟ್ವಾಳ ತಾಲೂಕು ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ  ಮಿನಿ ವಿಧಾನಸೌಧ ಮುಂಭಾಗ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂವಿಧಾನದತ್ತ ಹಕ್ಕುಗಳನ್ನು ಚಲಾಯಿಸುವುದರೊಂದಿಗೆ ಕಷ್ಟಸಹಿಷ್ಣುಗಳಾಗುವ ಹಾಗೂ ಗಡಿಯಲ್ಲಿರುವ ಸೈನಿಕರ ಶ್ರಮ ಸಾರ್ಥಕವಾಗುವಂತೆ ಮಾಡುವ ಕೆಲಸಗಳನ್ನು ಮಾಡಬೇಕು ಎಂದು ಬೊಳಂತಿಮೊಗರು ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ ಸಹಶಿಕ್ಷಕ ವಿಠಲ ನಾಯಕ್ ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಗಣರಾಜ್ಯೋತ್ಸವದ ಸಂದರ್ಭ ತಾಲೂಕಿನ ನಾಗರಿಕರು ಸಾಂವಿಧಾನಿಕ ಹಕ್ಕುಗಳನ್ನು ಅರಿತು ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಬಂಟ್ವಾಳ ಎಎಸ್ಪಿ ಸೈದುಲು ಅಡಾವತ್, ಸ್ವಾತಂತ್ರ್ಯ ಹೋರಾಟಗಾರ ಶಾಮರಾವ್ ಆಚಾರ್ಯ ಮಾತನಾಡಿ ಸಂದೇಶ ನೀಡಿದರು. ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್, ಸಿಡಿಪಿಒ ಸುಧಾಜೋಷಿ ವೇದಿಕೆಯಲ್ಲಿದ್ದರು.  ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ವಂದಿಸಿದರು. ಕಲಾವಿದ ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಪೊಲೀಸ್ ಎಸ್.ಐ. ಚಂದ್ರಶೇಖರ್ ನೇತೃತ್ವದಲ್ಲಿ ಪೊಲೀಸ್, ಗೃಹರಕ್ಷಕ ದಳ, ಎನ್.ಸಿ.ಸಿ., ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್, ಕಬ್, ಬುಲ್ ಬುಲ್ ಮತ್ತು ನಾನಾ ಶಾಲಾ ವಿದ್ಯಾರ್ಥಿಗಳಿಂದ ಮೆರವಣಿಗೆ, ಪಥಸಂಚಲನ, ಪುರಸಭೆ ವ್ಯಾಪ್ತಿಯ

ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ,ರವಿಶಂಕರ್, ಪ್ರಭಾರ ಉಪತಹಶೀಲ್ದಾರ್ ಸೀತಾರಾಮ, ಗ್ರೆಟ್ಟಾ ಮಸ್ಕರೇಞಸ್,  ಕಂದಾಯ ನಿರೀಕ್ಷಕ ರಾಮ ಕಾಟಿ ಪಳ್ಳ, ನವೀನ್ ಬೆಂಜನ ಪದವು, ದಿವಾಕರ ಮುಗುಳಿಯ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಹಾಜರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಬಿ.ವಿ.ಕಾರಂತ ಹುಟ್ಟಿದ ತಾಲೂಕಲ್ಲಿ ಸುಸಜ್ಜಿತ ರಂಗಮಂದಿರವೇ ಇಲ್ಲ

| ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಪರದಾಟ | ತಾಲೂಕು ಕೇಂದ್ರದಲ್ಲಿ ಜಾಗವೇ ದೊರಕಿಲ್ಲ (more…)

21 minutes ago

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

21 hours ago