ಬಂಟ್ವಾಳ

ಇರಾ ಬಾಳೆಪುಣಿ ಶಾಲೆ: ಆಂಗ್ಲ ಮಾಧ್ಯಮ ಸಮಾಲೋಚನಾ ಸಭೆ

ಇರಾ: ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಬಾಳೆಪುಣಿಯಲ್ಲಿರುವ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ    ಎಲ್ ಕೆ ಜಿ,ಯು ಕೆ ಜಿ ತರಗತಿಗಳನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ಇರಾ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ  ಅಬ್ದುಲ್  ರಝಾಕ್  ಹೇಳಿದರು.

ಜಾಹೀರಾತು

ಇರಾ ಬಾಳೆಪುಣಿ ಶಾಲೆಯಲ್ಲಿ ನಡೆದ ಪೋಷಕರ ಮತ್ತು ಎಸ್ ಡಿ ಎಂ ಸಿ ಯ ಸಭೆಯನ್ನುದ್ದೇಶಿಸಿ  ಮಾತನಾಡಿ, ಊರಿನ ಹಳೆಯ ವಿದ್ಯಾರ್ಥಿಗಳು ತಮ್ಮ ಶ್ರಮದಾನ ಮತ್ತು ಆರ್ಥಿಕ ಸಹಾಯದ ಮೂಲಕ ಸರಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಬೇಕೆಂದರು.

ತಾಲೂಕು ಪಂಚಾಯತ್ ಅಧ್ಯಕ್ಷರಾದ  ಚಂದ್ರಹಾಸ ಕರ್ಕೇರ ಮಾತನಾಡಿ, ಶಾಲೆಯ ಸಬಲೀಕರಣಕ್ಕೆ ಸರ್ವರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.  ಶಾಲೆಯ ಪ್ರಗತಿಗಾಗಿ ಹೊಸ ಹೆಜ್ಜೆ ಇರಿಸಿರುವ ಜಮಾತ್ ನ ಅಧ್ಯಕ್ಷರಿಗೆ, ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು .ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಶಿವಪ್ರಕಾಶ್ ಆಂಗ್ಲಮಾಧ್ಯಮ ತರಗತಿಗಳನ್ನು ಆರಂಭಿಸುವ ಬಗ್ಗೆ ಪ್ರಶಂಸಿಸಿ ಅದರ ಇತಿಮಿತಿಗಳ ಬಗ್ಗೆ ವಿವರಿಸಿದರು.

ಜಮಾತ್ ನ ಅಧ್ಯಕ್ಷರಾದ ಎಮ್.ಬಿ.ಸಖಾಫಿ  ಶಾಲೆಯ ಉಳಿವಿಗಾಗಿ ಊರವರ ಜೊತೆ ಚರ್ಚಿಸಿ ಆಂಗ್ಲ ಮಾಧ್ಯಮ ತರಗತಿಗಳನ್ನ ಆರಂಭಿಸುವ ಬಗ್ಗೆ  ಕೈಗೊಂಡ ತೀರ್ಮಾನದ ಮನವಿಯನ್ನು ಸಭೆಯಲ್ಲಿ ವಾಚಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಸಭೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ  ಹಸೈನಾರ್, ಆಂಗ್ಲಮಾಧ್ಯಮ ಸಮಿತಿಯ ಅಧ್ಯಕ್ಷರಾದ  ಸಿ . ಎಚ್. ಮೊಹಮ್ಮದ್, ಗ್ರಾ.ಪಂ .ಸದಸ್ಯರಾದ ಮೊಯಿದೀನ್ ಕುಂಞ,  ಉಮ್ಮರ್, ಎಸ್.ಡಿ.ಎಂ.ಸಿ.ಸದಸ್ಯರು, ಜಮಾತ್ ನ ಸದಸ್ಯರು, ಮಂಚಿ ವಲಯದ ಶಿಕ್ಷಣ ಸಂಯೋಜಕರಾದ  ಸುಶೀಲಾ ಹಾಗೂ ಮಕ್ಕಳ ಪೋಷಕರು ಪಾಲ್ಗೊಂಡಿದ್ದರು.  ಸಹಶಿಕ್ಷಕರಾದ ಸುಬ್ರಮಣ್ಯ ಸ್ವಾಗತಿಸಿ, ಮುಖ್ಯಶಿಕ್ಷಕಿ ಸವಿತಾ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಬಿ.ವಿ.ಕಾರಂತ ಹುಟ್ಟಿದ ತಾಲೂಕಲ್ಲಿ ಸುಸಜ್ಜಿತ ರಂಗಮಂದಿರವೇ ಇಲ್ಲ

| ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಪರದಾಟ | ತಾಲೂಕು ಕೇಂದ್ರದಲ್ಲಿ ಜಾಗವೇ ದೊರಕಿಲ್ಲ (more…)

2 hours ago