ನರಿಕೊಂಬು: ಮಹಮ್ಮಾಯಿ ಯಕ್ಷಗಾನ ಕಲಾ ಕೇಂದ್ರ, ಕೀರ್ತನಾ ಸಂಗೀತ ಶಾಲೆ ಕಲಾರಾಧನೆ

ನರಿಕೊಂಬು: ಇಲ್ಲಿನ ಶ್ರೀ ಮಹಮ್ಮಾಯಿ ಯಕ್ಷಗಾನ ಕಲಾ ಕೇಂದ್ರ ಮತ್ತು ಕೀರ್ತನಾ ಸಂಗೀತ ಶಾಲೆ ಇವುಗಳ ಕಲಾರಾಧನೆ  2019 ಅಂಗವಾಗಿ 26 ಶನಿವಾರದಂದು ಸಂಗೀತಾರಾಧನೆ ಕಾರ್ಯಕ್ರಮವು ನಡೆಯಿತು. ಬಂಟ್ವಾಳ ಪೋಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ ನಾಗರಾಜ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಸಂಗೀತ ಸಾಹಿತ್ಯ ಯಕ್ಷಗಾನದಂತಹ ಕಲಾಭಿವ್ಯಕ್ತಿಗಳು ಜನರನ್ನು ಸುಸಂಸ್ಕೃತಗೊಳಿಸುವುದರಿಂದ ಸಮಾಜದಲ್ಲಿ ಅನ್ಯಾಯ ಅಪರಾಧಗಳು ಕಡಿಮೆಯಾಗಿ ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಅವರು ಹೇಳಿದರು.

ಜಾಹೀರಾತು

ಮಹಮ್ಮಾಯಿ ಯಕ್ಷಗಾನ ಕಲಾಕೇಂದ್ರದ ಅಧ್ಯಕ್ಷ ಪಿ ಕೃಷ್ಣರಾಜ ಭಟ್ ಕರ್ಬೆಟ್ಟು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೀರ್ತನಾ ಸಂಗೀತ ಶಾಲೆಯ ಪ್ರಾಚಾರ್ಯ ಕೃಷ್ಣಾಚಾರ್ಯ ಮತ್ತು ರಜತ ಕೃಷ್ಣಾಚಾರ್ಯ ಉಪಸ್ಥಿತರಿದ್ದು ಸ್ವಾಗತಿಸಿದರು. ಹರ್ಷರಾಜ್ ಕಾರ್ಯಕ್ರಮ ನಿರೂಪಿಸಿದರು. ದಿನವಿಡೀ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಸಂಗೀತ ಪ್ರತಿಭಾ ಪ್ರದರ್ಶನ ನಡೆಯಿತು. ಸಂಜೆ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯನ್ನು ಮೈಸೂರಿನ ವಿದ್ವಾನ್ ಎನ್. ಆರ್ ಪ್ರಶಾಂತ್ ನಡೆಸಿಕೊಟ್ಟರು. ಸುಮಾರು 2 ಗಂಟೆಗಳ ಕಾಲ ನಡೆದ ಕಾರ್ಯಕ್ರಮವು ಸಂಗೀತ ಪ್ರೀಯರ ಮನಸೂರೆಗೊಂಡಿತು.

ದಿನಾಂಕ 27 ಭಾನುವಾರ ನಡೆದ ಯಕ್ಷಾರಾಧನೆ ಕಾರ್ಯಕ್ರಮದಲ್ಲಿ ಮಹಮ್ಮಾಯಿ ಕಲಾಕೇಂದ್ರದ ವಿದ್ಯಾರ್ಥಿಗಳು ತಮ್ಮ ಯಕ್ಷಗಾನ ಪ್ರತಿಭಾ ಪ್ರದರ್ಶನ ತೋರ್ಪಡಿಸಿದರು. ನಾಟ್ಯಗುರು ಶ್ರೀವತ್ಸ ಎಸ್. ಆರ್ ಕಾರ್ಕಳ ಇವರ ನಿರ್ದೇಶನದಲ್ಲಿ ಯಕ್ಷಗಾನದ ಶಾಸ್ತ್ರೀಯ ನೆಲೆಗಟ್ಟನ್ನು ಪರಿಚಯಿಸುವ ಪೂರ್ವ ರಂಗ ಪ್ರಸ್ತುತಿಯನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ಮೋಹನ್ ರಾವ್ ಕೆ ಮಾತನಾಡುತ್ತಾ ಕಲೆ ಸಾಹಿತ್ಯಗಳು ವ್ಯಕ್ತಿಗೆ ಶೋಭೆಯನ್ನು ತರುವುದರೊಂದಿಗೆ ಸಮಾಜದಲ್ಲಿ ಆರೋಗ್ಯಕರ ವಾತಾವರಣ ನಿರ್ಮಾಣವಾಗಲು ಸಹಕರಿಸುತ್ತವೆ ಎಂದರು. ಸಂದರ್ಭ ಯಕ್ಷಗಾನದ ಕುರಿತಾಗಿ ಮಕ್ಕಳಲ್ಲಿ ಅರಿವು ಮೂಡಿಸಲು ಶ್ರಮಿಸಿರುವ ನರಿಕೊಂಬು ಹಿ.ಪ್ರಾ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾರದಾ ಅವರನ್ನು ಸನ್ಮಾನಿಸಲಾಯಿತು. ನಂತರ ಮಹಮ್ಮಾಯಿ ಯಕ್ಷಗಾನ ಕಲಾಕೇಂದ್ರದ ಮಹಿಳಾ ಘಟಕದ ಸದಸ್ಯೆಯರು ಜಾಂಬವತಿ ಕಲ್ಯಾಣ ಎಂಬ ತಾಳ ಮದ್ದಳೆಯನ್ನು ಪ್ರಸ್ತುತ ಪಡಿಸಿದರು. ಬಳಿಕ ಕಲಾಕೇಂದ್ರದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಸಮುದ್ರ ಮಥನ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಉಪನ್ಯಾಸಕ ದಾಮೋದರ ಕಾರ್ಯಕ್ರಮಗಳನ್ನು ನಿರೂಪಿಸಿದರು. ಕಲಾಕೇಂದ್ರದ ಅಧ್ಯಕ್ಷರಾದ ಪಿ ಕೃಷ್ಣರಾಜ್ ಭಟ್ ಕರ್ಬೆಟ್ಟು ಸ್ವಾಗತಿಸಿದರು. ಮಹಮ್ಮಾಯಿ ಯಕ್ಷಗಾನ ಕಲಾಕೇಂದ್ರದ ಟ್ರಸ್ಟಿ ವೈದ್ಯರಾದ ಸುಬ್ರಹ್ಮಣ್ಯ ಭಟ್ ವಂದಿಸಿದರು. ಟ್ರಸ್ಟಿನ ಸದಸ್ಯರಾದ ವೆಂಕಟೇಶ್ ಪುತ್ರೋಟಿಬೈಲು, ಯತೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನರಿಕೊಂಬು: ಮಹಮ್ಮಾಯಿ ಯಕ್ಷಗಾನ ಕಲಾ ಕೇಂದ್ರ, ಕೀರ್ತನಾ ಸಂಗೀತ ಶಾಲೆ ಕಲಾರಾಧನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*