ಬಂಟ್ವಾಳ: ಇಸ್ಲಾಮಿನ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿರುವ ಮಿತ್ತಬೈಲ್ ಉಸ್ತಾದ್ ಅವರ ಸರಳ ಜೀವನವನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ತಲಪಾಡಿ ಬದ್ರಿಯಾ ಜುಮಾ ಮಸೀದಿಯ ಖತೀಬ್ ಸ್ವಾದಿಕ್ ಅಝ್ಹರಿ ಕೊಪ್ಪ ಹೇಳಿದ್ದಾರೆ.
ಅವರು ರವಿವಾರ ತಲಪಾಡಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಇತ್ತೀಚೆಗೆ ನಿಧನರಾದ ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾದ ಉಪಾಧ್ಯಕ್ಷ ಶೈಖುನಾ ಅಬ್ದುಲ್ ಜಬ್ಬಾರ್ ಉಸ್ತಾದ್ ಮಿತ್ತಬೈಲ್ ಅವರ ಅನುಸ್ಮರಣೆ ಹಾಗೂ ತಹ್ಲೀಲ್ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಮಂಗಳೂರು ಖಾಝಿಯಾಗುವ ಅವಕಾಶ ಉಸ್ತಾದ್ರಿಗೆ ಒದಗಿಬಂದರೂ ನಯವಾಗಿ ನಿರಾಕರಿಸುವ ಮೂಲಕ ಸರಳ ಜೀವನ ನಡೆಸುವ ಆದರ್ಶ ಪ್ರಾಯರಾಗಿದ್ದರು ಎಂದು ಹೇಳಿದರು.
ಮಿತ್ತಬೈಲ್ ಉಸ್ತಾದ್ ಅವರ ಪುತ್ರರಾದ ಇರ್ಷಾದ್ ದಾರಿಮಿ ಹಾಗೂ ಝೈನುಲ್ ಆಬಿದ್ ಅವರು ತಹ್ಲೀಲ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಈ ಸಂದರ್ಭದಲ್ಲಿ ಆಡಳಿತ ಕಮಿಟಿಯ ಅಧ್ಯಕ್ಷ ಇದಿನಬ್ಬ ಕರ್ನಾಟಕ, ಉಪಾಧ್ಯಕ್ಷ ಇದಿನಬ್ಬ ಕೆಎಸ್ಸಾರ್ಟಿಸಿ, ಕೋಶಾಧಿಕಾರಿ ಮುಹಮ್ಮದ್ ಕೆ., ಲತೀಫ್ ಬಿ.ಸಿ., ನಝೀರ್ ಟಿ.ಎಂ. ಹಾಗೂ ಸಮಿತಿ ಸದಸ್ಯರ ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಅನ್ನದಾನ ಸಮರ್ಪಣೆ ನಡೆಯಿತು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜಬ್ಬಾರ್ ಉಸ್ತಾದ್ ಅವರ ಅನುಸ್ಮರಣೆ-ತಹ್ಲೀಲ್ ಸಮರ್ಪಣೆ"
Be the first to comment on "ಜಬ್ಬಾರ್ ಉಸ್ತಾದ್ ಅವರ ಅನುಸ್ಮರಣೆ-ತಹ್ಲೀಲ್ ಸಮರ್ಪಣೆ"