ಬಂಟ್ವಾಳ

ಜಬ್ಬಾರ್ ಉಸ್ತಾದ್ ಅವರ ಅನುಸ್ಮರಣೆ-ತಹ್ಲೀಲ್ ಸಮರ್ಪಣೆ

 

ಬಂಟ್ವಾಳ: ಇಸ್ಲಾಮಿನ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿರುವ ಮಿತ್ತಬೈಲ್ ಉಸ್ತಾದ್ ಅವರ ಸರಳ ಜೀವನವನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ತಲಪಾಡಿ ಬದ್ರಿಯಾ ಜುಮಾ ಮಸೀದಿಯ ಖತೀಬ್ ಸ್ವಾದಿಕ್ ಅಝ್ಹರಿ ಕೊಪ್ಪ ಹೇಳಿದ್ದಾರೆ.
ಅವರು ರವಿವಾರ ತಲಪಾಡಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಇತ್ತೀಚೆಗೆ ನಿಧನರಾದ ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾದ ಉಪಾಧ್ಯಕ್ಷ ಶೈಖುನಾ ಅಬ್ದುಲ್ ಜಬ್ಬಾರ್ ಉಸ್ತಾದ್ ಮಿತ್ತಬೈಲ್ ಅವರ ಅನುಸ್ಮರಣೆ ಹಾಗೂ ತಹ್ಲೀಲ್ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಮಂಗಳೂರು ಖಾಝಿಯಾಗುವ ಅವಕಾಶ ಉಸ್ತಾದ್‌ರಿಗೆ ಒದಗಿಬಂದರೂ ನಯವಾಗಿ ನಿರಾಕರಿಸುವ ಮೂಲಕ ಸರಳ ಜೀವನ ನಡೆಸುವ ಆದರ್ಶ ಪ್ರಾಯರಾಗಿದ್ದರು ಎಂದು ಹೇಳಿದರು.
ಮಿತ್ತಬೈಲ್ ಉಸ್ತಾದ್ ಅವರ ಪುತ್ರರಾದ ಇರ್ಷಾದ್ ದಾರಿಮಿ ಹಾಗೂ ಝೈನುಲ್ ಆಬಿದ್ ಅವರು ತಹ್ಲೀಲ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಈ ಸಂದರ್ಭದಲ್ಲಿ ಆಡಳಿತ ಕಮಿಟಿಯ ಅಧ್ಯಕ್ಷ ಇದಿನಬ್ಬ ಕರ್ನಾಟಕ, ಉಪಾಧ್ಯಕ್ಷ ಇದಿನಬ್ಬ ಕೆಎಸ್ಸಾರ್ಟಿಸಿ, ಕೋಶಾಧಿಕಾರಿ ಮುಹಮ್ಮದ್ ಕೆ., ಲತೀಫ್ ಬಿ.ಸಿ., ನಝೀರ್ ಟಿ.ಎಂ. ಹಾಗೂ ಸಮಿತಿ ಸದಸ್ಯರ ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಅನ್ನದಾನ ಸಮರ್ಪಣೆ ನಡೆಯಿತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ