ಬ್ರಹ್ಮರಕೂಟ್ಲು ಸರಕಾರಿ ಶಾಲೆಯಲ್ಲಿ ಭಾಷಾಲೋಕ

ಬಂಟ್ವಾಳ: ಬ್ರಹ್ಮರಕೂಟ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾಷಾ ಬೋಧನೆ ಯ ಕುರಿತು ವಿಶೇಷವಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ವ್ಯವಸ್ಥೆಗೊಳಿಸಿದ ,’ಭಾಷಾ ಲೋಕ ‘ತರಗತಿಯನ್ನು  ಲೋಕಾರ್ಪಣೆಗೊಳಿಸಲಾಯಿತು.
ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ  ಅವರು, ‘ಭಾಷಾ ಲೋಕ’ತರಗತಿಯನ್ನು ಸಾಂಕೇತಿಕವಾಗಿ ರಿಬ್ಬನ್ ಕತ್ತರಿಸಿ, ಶಾಲಾ ಧ್ವಜ ಅರಳಿಸಿ ಅದರಿಂದ ಕನ್ನಡ ಹಾಗೂ ಇಂಗ್ಲಿಷ್ ಅಕ್ಷರಗಳನ್ನು ಉದುರಿಸುವುದರ ಮೂಲಕ ವಿಶಿಷ್ಟವಾಗಿ  ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಇಂತಹ ತರಗತಿಗಳನ್ನು ತಾಲೂಕಿನಾದ್ಯಂತ ಎಲ್ಲಾ ಶಾಲೆಗಳಲ್ಲಿ ಸಜ್ಜು ಗೊಳಿಸಬೇಕು,ಈ ಬಗ್ಗೆ ಇಲಾಖೆ ಗಮನಕ್ಕೆ ತರಲಾಗುವುದು ಹಾಗೂ ಇದಕ್ಕೆ ಕಾರಣರಾದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಅಧ್ಯಕ್ಷತೆಯನ್ನು  ಎಸ್ . ಡಿ. ಎಂ. ಸಿ. ಅಧ್ಯಕ್ಷೆ  ಶ್ರೀಕಲಾ ರವರು ವಹಿಸಿ ಮಾತನಾಡಿ, ಇಂತಹ ನೂತನ ಪ್ರಯೋಗಗಳಿಂದ ಸರ್ಕಾರಿ ಶಾಲೆಗಳನ್ನು ಉಳಿಸಬಹುದಾಗಿದೆ ಎಂದು ಅಭಿಪ್ರಾಯ ಪಟ್ಟರು.
ಸಂಪನ್ಮೂಲ ಶಿಕ್ಷಕಿ  ನಿರ್ಮಲಾ ವಿಲ್ಮಾ ರೊಡ್ರಿಗಸ್ ಮಾತನಾಡಿ  ಭಾಷಾ ಲೋಕ ತರಗತಿಗಳು ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನ ಗೊಳ್ಳುವುದರ ಮೂಲಕ ಯಶಸ್ಸನ್ನು ಸಾಧಿಸಲಿ ಎಂದು ಹಾರೈಸಿದರು.ಇದೇ ಸಂದರ್ಭದಲ್ಲಿ ಶಾಲೆಗೆ ಹಳೇವಿದ್ಯಾರ್ಥಿಯೊಬ್ಬರು ಕೊಡುಗೆಯಾಗಿ ಧ್ವನಿವರ್ಧಕ ನೀಡಿರುವುದನ್ನು ಅಭಿನಂದಿಸಲಾಯಿತು. ವೇದಿಕೆಯಲ್ಲಿ ದಿವಾಕರ ಪಂಬದಬೆಟ್ಟು,  ಯೋಗೀಶ್ ಕುಲಾಲ್, ಮಂಜುನಾಥ ಕಾಮತ್,  ಕಿಶೋರ್,  ಶಶಿಧರ ಬ್ರಹ್ಮರಕೂಟ್ಲು,  ಉದ್ಯಮಿ  ಹಮೀದ್  ಹಾಗೂ ಮೊಹಮ್ಮದ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಫ್ಲೋರಿನ್ ರೆಬೆಲ್ಲೋ ಸ್ವಾಗತಿಸಿದರು.ಮಾರ್ಗದರ್ಶಿ ಶಿಕ್ಷಕಿ  ವೇದಾವತಿ ಪ್ರಸ್ತಾಪಿಸಿದರು.ಕು.ರಚನಾ ವಂದಿಸಿದರು. ಮಾರ್ಗದರ್ಶಿ ಶಿಕ್ಷಕಿ  ಭಾರತಿ ಶೇಷಪ್ಪ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬ್ರಹ್ಮರಕೂಟ್ಲು ಸರಕಾರಿ ಶಾಲೆಯಲ್ಲಿ ಭಾಷಾಲೋಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*