ಬಂಟ್ವಾಳ

ತುಳು ಬದುಕು ವಸ್ತುಸಂಗ್ರಹಾಲಯದ ರಜತ ವರ್ಷಾಚರಣೆಗೆ ಚಾಲನೆ

ಬಂಟ್ವಾಳ: ಬಿ.ಸಿ.ರೋಡಿನ ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಹಾಗೂ ತುಳು ಬದುಕು ವಸ್ತು ಸಂಗ್ರಹಾಲಯದ ರಜತ ವರ್ಷಾಚರಣೆಗೆ ಬುಧವಾರ ಸಂಜೆ ಚಾಲನೆ ದೊರಕಿತು.

ಜಾಹೀರಾತು

ದೀಪ ಬೆಳಗಿಸಿ ಉದ್ಘಾಟಿಸಿದ ವಿಧಾನಪರಿಷತ್ತು ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಭಾರತದ ಪಾರಂಪರಿಕ ಮೌಲ್ಯವನ್ನು ಪ್ರಪಂಚವೇ ನೋಡುತ್ತಿದೆ. ಆದರೆ ಮುಂದಿನ ತಲೆಮಾರಿಗೆ ನಾವೇನು ಬಿಟ್ಟು ಹೋಗುತ್ತಿವೆ ಎನ್ನುವ ಆತಂಕವೂ ಕಾಡುತ್ತಿದೆ ಎಂದರು.

ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಅಧ್ಯಕ್ಷ ತುಕರಾಮ ಪೂಜಾರಿ ಸ್ವಾಗತಿಸಿ. ಪ್ರಾಸ್ತಾವಿಕ ಮಾತನಾಡಿ ರಜತಾ ವರ್ಷಾಚರಣೆಯ ಅಂಗವಾಗಿ ಕೇಂದ್ರದ ಗ್ರಂಥಾಲಯಕ್ಕೆ ಪುಸ್ತಕ ಭಿಕ್ಷೆ ಅಭಿಯಾನ ಹಾಗೂ ಸಂಸ್ಕತಿ ಗ್ರಾಮ ಯೊಜನೆಗೆ ಚಾಲನೆ ದೊರಕಿದೆ ಎಂದರು.
ಹಿರಿಯ ಲೇಖಕ ಆಗುಂಬೆ ನಟರಾಜ ವಿಶೇಷ ಉಪನ್ಯಾಸ ನೀಡಿ ಭಾರತೀಯರಿಗೆ ಇತಿಹಾಸ ಪ್ರಜ್ಞೆ ಕಡಿಮೆಯಾಗಿದೆ. ರಾಣಿ ಲಕ್ಷ್ಮೀಬಾಯಿಗೆ ಕೊಟ್ಟಷ್ಟು ಪ್ರಾಧಾನ್ಯತೆಯನ್ನು ರಾಣಿ ಅಬ್ಬಕ್ಕಗೆ ನೀಡಿಲ್ಲ ಎಂದರು.

ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಮಾತನಾಡಿದರು. ಪುತ್ತೂರು ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಕ್ಸೇವಿಯರ್ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ ನಡೆದು ಬಂದ ದಾರಿಯ ಬಗ್ಗೆ ಮಹಾಬಲೇಶ್ವರ ಹೆಬ್ಬಾರ್ ಮಾಹಿತಿ ನೀಡಿದರು. ಕಾರ್ಯದರ್ಶಿ ಆಶಾಲತಾ ಸುವರ್ಣ ವಂದಿಸಿದರು. ನ್ಯಾಯವಾದಿ ನವನೀತ ಹಿಂಗಾಣಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ