ಪೊಳಲಿ ಬ್ರಹ್ಮಕಲಶೋತ್ಸವ – ಸುಗಮ ನಿರ್ವಹಣೆಗೆ ಸಿದ್ಧತಾ ಸಭೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಪೊಳಲಿ: ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಶುಕ್ರವಾರ ನಡೆಯಿತು.

ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ, ಮಾಜಿ ಶಾಸಕ ನಾಗರಾಜ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಮೋಹನ್ ಆಳ್ವಾ, ಪ್ರಮುಖರಾದ ಸುಬ್ರಾಯ ಕಾರಂತ, ಕೃಷ್ಣರಾಜ ಆಳ್ವ, ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ವೆಂಕಟೇಶ್ ನಾವುಡ ಪೊಳಲಿ, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ , ಯು.ಪಿ. ಇಬ್ರಾಹಿಂ, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಕುಮಾರ್, ಬಂಟ್ವಾಳ ತಹಶೀಲ್ದಾರ್ ರಶ್ಮಿ ಮುಂತಾದವರು ಉಪಸ್ಥಿತರಿದ್ದರು.

ಏನೇನು ಸೂಚನೆ:

ಸಭೆಯಲ್ಲಿ ವಿವಿಧ ಮಾರ್ಗಸೂಚಿಗಳನ್ನು ತಿಳಿಸಿದ ರಾಜೇಶ್ ನಾಯ್ಕ್, ಪ್ರತಿದಿನ 200 ಮಂದಿ, ಹೆಚ್ಚುವರಿ 80 ಮಂದಿ ಸ್ವಯಂಸೇವಕರಾಗಿ ಸೇವೆಸಲ್ಲಿಸಲಿದ್ದಾರೆ. ಅಡ್ಡೂರಿನಿಂದ ನೋ ಪಾರ್ಕಿಂಗ್ ಬೋರ್ಡ್ ಅಳವಡಿಸಿ ಟ್ರಾಫಿಕ್ ಜಾಂ ಆಗದಂತೆ, ವಾಹನಗಳು ಅಡ್ಡಾದಿಡ್ಡಿ ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಇನ್ಸ್ಪೆಕ್ಟರ್ಗಳಿಗೆ ಸೂಚಿಸಿದರು. ದೇವಸ್ಥಾನದ ಸಮೀಪ ಎರಡು ಕಡೆಗಳಲ್ಲಿ ತಲಾ ಒಂದೊಂದು ಎಕ್ರೆ ಜಾಗದಲ್ಲಿ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗಿದೆ. ನಡೆಯಲಾಗದವರಿಗೆ ಪ್ರವೇಶದ್ವಾರದಿಂದ ದೇವಸ್ಥಾನದವರೆಗೆ ಸಣ್ಣ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸಿಸಿ ಕ್ಯಾಮರಾ: ದೇವಸ್ಥಾನದ ವತಿಯಿಂದ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕೆಮರಾ ಅಳವಡಿಸಲಿದೆ. ತಮಿಳುನಾಡು ಹಾಗೂ ಆಂಧ್ರ ಕಡೆಗಳಿಂದ ಪಿಕ್ಪಾಕೆಟ್ ಕಳ್ಳರು ಆಗಮಿಸುವ ಸಾಧ್ಯತೆ ಇರುವುದರಿಂದ ಕೈತೊಳೆಯುವ ಕಡೆ ಸೇರಿ ಹೆಚ್ಚು ಜನರು ಸೇರುವಲ್ಲಿ ಸಿಸಿ ಕೆಮರಾ ಅಳವಡಿಸಬೇಕು. ಆಯಕಟ್ಟಿನ ಪ್ರದೇಶಗಳಲ್ಲಿ ಮೈಕ್ ವ್ಯವಸ್ಥೆ ಇದೆ. ದೇವಸ್ಥಾನದ ಸಮೀಪ ಕಾಲ್ಸೆಂಟರ್ ವ್ಯವಸ್ಥೆ ಇದ್ದು, ಇದು ಕಂಟ್ರೋಲ್ ರೂಂ ಆಗಿ ಕೆಲಸ ಮಾಡಲಿದೆ. ಯಾವುದೇ ಸಮಸ್ಯೆ ಇದ್ದರೆ ತನ್ನ ಜೊತೆ ಚರ್ಚಿಸಬಹುದು. ಹೆಚ್ಚು ಜನರು ಸೇರುವುದರಿಂದ ಮೊಬೈಲ್ ಟವರ್ ಅಳವಡಿಸಲು ದೂರವಾಣಿ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಸ್ವಯಂಸೇವಕರು, ಪೊಲೀಸರಿಗೆ ಸಂವಹನ ನಡೆಸಲು ವಾಕಿಟಾಕಿ ವ್ಯವಸ್ಥೆ ಮಾಡಲಾಗುವುದು ಎಂದರು.

ಮಾ.10ರಂದು ಬಿಜೆಪಿ ಮುಖಂಡ ಯಡಿಯೂರಪ್ಪ, ಮಾ.12ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸುವ ಸಾಧ್ಯತೆ ಇದ್ದು, ಹೆಚ್ಚಿನ ಮಂತ್ರಿಗಳು ಆಗಮಿಸಲಿದ್ದಾರೆ. ಜೊತೆಗೆ ಲಕ್ಷಕ್ಕೂ ಹೆಚ್ಚು ಮಂದಿ ಜನರ ಆಗಮನದ ನಿರೀಕ್ಷೆ ಇದೆ. ಇದರೊಂದಿಗೆ ನಾನಾ ಭಾಗಗಳಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಲಿದೆ ಎಲ್ಲವೂ ಸುಸೂತ್ರವಾಗಿ ನಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು

 ಸ್ಪೆಶಲ್ ಟೀಂ: ರೂಟ್ ಬಸ್ಗಳಿಗೆ ಪ್ರಯಾಣಿಕರು ಹತ್ತುವಇಳಿಯುವ ವ್ಯವಸ್ಥೆ ಮಾಡಲಾಗುವುದು. ಎಲ್ಲಿಯೂ ವಿದ್ಯುತ್ ವ್ಯತ್ಯಯ ಆಗದಂತೆ ಮೆಸ್ಕಾಂನ ಸ್ಪೆಷಲ್ ಟೀಮನ್ನು ನಿಯೋಜಿಸಬೇಕು. ಅಂಬ್ಯುಲೆನ್ಸ್ ವ್ಯವಸ್ಥೆಯೂ ಇರಬೇಕೆಂದು ಸೂಚಿಸಲಾಯಿತು. ಮಳಲಿಯಿಂದ ಫಲ್ಗುನಿ ನದಿ ಮುಖಾಂತರ ಪೊಳಲಿಗೆ ಬರುವ ಮಳಲಿಯ ಭಕ್ತರಿಗೆ ನದಿಯಲ್ಲಿ ಸುಮಾರು ೪೦೦ ಬೋಟ್ ಅಳವಡಿಸಿ ಸಂಚರಿಸಲು ವ್ಯವಸ್ಥೆ ಇದೆ. ಭಕ್ತರಿಗೆ ಬೆಳಿಗ್ಗೆ ನಾಷ್ಟ, ಮಧ್ಯಾಹ್ನ ಹಾಗೂ ರಾತ್ರಿ ಊಟೋಪಚಾರದ ವ್ಯವಸ್ಥೆ ಇದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಜವಾಬ್ದಾರಿಯನ್ನು ಆಳ್ವಾಸ್ ಅಧ್ಯಕ್ಷ ಮೋಹನ್ ಆಳ್ವಾ ವಹಿಸಿದ್ದು, ಮಂಗಳವಾದ್ಯ, ಭಜನೆ ಸೇರಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಎರಡು ಚಪ್ಪರಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜೇಶ್ ನಾಯ್ಕ್ ತಿಳಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪೊಳಲಿ ಬ್ರಹ್ಮಕಲಶೋತ್ಸವ – ಸುಗಮ ನಿರ್ವಹಣೆಗೆ ಸಿದ್ಧತಾ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*