ಸರಕಾರಿ ಶಾಲೆ ಉಳಿಸಿ ತಂಡದಿಂದ ಗ್ರಾಮವಾಸ್ತವ್ಯ

ಬಂಟ್ವಾಳ: ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತದಲ್ಲಿರುವ  ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕೂಕ್ರಬೆಟ್ಟು ಸರಕಾರಿ ಶಾಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ನಡೆಸಿ ಶಾಲೆ ಉಳಿಸುವ ಪ್ರಯತ್ನಕ್ಕೆ ಪ್ರಕಾಶ್ ಅಂಚನ್ ನೇತೃತ್ವದಲ್ಲಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ, ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಹಾಗೂ ಮರೋಡಿ ಗ್ರಾಮಸ್ಥರು, ಸ್ಥಳೀಯ ಶಿಕ್ಷಣಾಭಿಮಾನಿಗಳು ಮುಂದಾಗಿದ್ದಾರೆ.

ಜಾಹೀರಾತು

ಫೆ.2 ರಂದು 3 ಗಂಟೆಗೆ  ಮರೋಡಿ ಗ್ರಾಮದಲ್ಲಿ ಮನೆ ಭೇಟಿ ಕಾರ್ಯಕ್ರಮ ಆರಂಭಗೊಳ್ಳಲಿದೆ. ಮನೆ ಭೇಟಿಯ ಮೂಲಕ ಸರಕಾರಿ ಶಾಲೆ ಉಳಿಸಲು ಗ್ರಾಮಸ್ಥರ ಸಹಕಾರ ಹಾಗೂ ಸರಕಾರಿ ಶಾಲೆ ಉಳಿಸುವ ಅನಿವಾರ್ಯತೆಯ ಬಗ್ಗೆ ತಂಡ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಿದೆ. ರಾತ್ರಿ ೮ ಗಂಟೆಗೆ ಕೂಕ್ರಬೆಟ್ಟು ಶಾಲೆಯಲ್ಲಿ ವಾಸವ್ಯ ಹೊಂದಿ ಫೆ. ೩ರಂದು ಬೆಳಿಗ್ಗೆ ೮ ಗಂಟೆಯಿಂದ ಮತ್ತೆ ಮನೆ ಭೇಟಿ  ಕಾರ್ಯ ಮುಂದುವರೆಯಲಿದೆ. ಬೆಳಿಗ್ಗೆ ೯ ಗಂಟೆಯಿಂದ ಶಾಲೆಯಲ್ಲಿ ಶೈಕ್ಷಣಿಕ ಸಂವಾದ ಹಾಗೂ ಊರಿನ ಶಾಲೆ ಉಳಿಸಿ ಬೆಳೆಸುವ ಪ್ರತಿಜ್ಞೆಯೊಂದಿಗೆ ಸಮಾರೋಪ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕೂಕ್ರಬೆಟ್ಟು ಶಾಲೆಗೆ ೬೦ ವರ್ಷಗಳ ಇತಿಹಾಸವಿದೆ. ನೂರಾರು ಮಂದಿಗೆ ವಿದ್ಯಾದಾನವನ್ನು ನೀಡಿದ ಆ ವಿದ್ಯಾದೇಗುಲ ಮಕ್ಕಳ ಕೊರತೆಯಿಂದ ಮುಚ್ಚುವ ಸ್ಥಿತಿಗೆ ತಲುಪಿದೆ. ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ದಶಕಗಳ ಹಿಂದೆ ನೂರಾರು ಮಕ್ಕಳಿದ್ದರು. ಆಂಗ್ಲ ಮಾಧ್ಯಮ ಶಿಕ್ಷಣದ ಪ್ರಭಾವದಿಂದ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಇಳಿಮುಖವಾಗಿದೆ. ಈಗ ಕೇವಲ 16 ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ.

ಮುಚ್ಚುವ ಹಂತದಲ್ಲಿದ್ದ ಬಂಟ್ವಾಳ ತಾಲೂಕಿನ ದಡ್ಡಲಕಾಡು ಶಾಲೆಗೆ ಮರುಜೀವ ನೀಡಿರುವ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿಯ ಅಧ್ಯಕ್ಷ ಪ್ರಕಾಶ್ ಅಂಚನ್ ಅವರು ಇದೀಗ ಕೂಕ್ರಬೆಟ್ಟು ಶಾಲೆ ಉಳಿಸುವತ್ತ ಮುಖ ಮಾಡಿರುವುದು ಗ್ರಾಮದ ಶಿಕ್ಷಣಾಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಈ ಶಾಲೆಯ ಸ್ಥಿತಿಗತಿಯನ್ನು ಅರಿತುಕೊಂಡು, ಅದಕ್ಕೆ ಪುನಶ್ಚೇತನ ನೀಡಲು ಯೋಜನೆ ರೂಪಿಸಲಾಗಿದೆ.  ಅದರಂತೆ ಫೆ.೨ರಂದು ಮರೋಡಿ ಗ್ರಾಮದಲ್ಲಿ ಮನೆ ಮನೆ ಭೇಟಿ, ಗ್ರಾಮ ವಾಸ್ತವ್ಯ ಮತ್ತು ೩ರಂದು ಗ್ರಾಮಸ್ಥರು, ಪೋಷಕರೊಂದಿಗೆ ಸಂವಾದವನ್ನು ಹಮ್ಮಿಕೊಳ್ಳಲಾಗಿದೆ. ಶಾಸಕರು ಸೇರಿದಂತೆ ಜನಪ್ರತಿನಿಧಿಗಳನ್ನು, ಅಧಿಕಾರಿಗಳನ್ನು, ಶಿಕ್ಷಣಾಭಿಮಾನಿಗಳನ್ನು, ಮಕ್ಕಳ ಪೋಷಕರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸರಕಾರಿ ಶಾಲೆ ಉಳಿಸಿ ತಂಡದಿಂದ ಗ್ರಾಮವಾಸ್ತವ್ಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*