ಜಿಲ್ಲಾ ಸುದ್ದಿ

ಸರಕಾರಿ ಶಾಲೆ ಉಳಿಸಿ ತಂಡದಿಂದ ಗ್ರಾಮವಾಸ್ತವ್ಯ

ಬಂಟ್ವಾಳ: ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತದಲ್ಲಿರುವ  ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕೂಕ್ರಬೆಟ್ಟು ಸರಕಾರಿ ಶಾಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ನಡೆಸಿ ಶಾಲೆ ಉಳಿಸುವ ಪ್ರಯತ್ನಕ್ಕೆ ಪ್ರಕಾಶ್ ಅಂಚನ್ ನೇತೃತ್ವದಲ್ಲಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ, ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಹಾಗೂ ಮರೋಡಿ ಗ್ರಾಮಸ್ಥರು, ಸ್ಥಳೀಯ ಶಿಕ್ಷಣಾಭಿಮಾನಿಗಳು ಮುಂದಾಗಿದ್ದಾರೆ.

ಜಾಹೀರಾತು

ಫೆ.2 ರಂದು 3 ಗಂಟೆಗೆ  ಮರೋಡಿ ಗ್ರಾಮದಲ್ಲಿ ಮನೆ ಭೇಟಿ ಕಾರ್ಯಕ್ರಮ ಆರಂಭಗೊಳ್ಳಲಿದೆ. ಮನೆ ಭೇಟಿಯ ಮೂಲಕ ಸರಕಾರಿ ಶಾಲೆ ಉಳಿಸಲು ಗ್ರಾಮಸ್ಥರ ಸಹಕಾರ ಹಾಗೂ ಸರಕಾರಿ ಶಾಲೆ ಉಳಿಸುವ ಅನಿವಾರ್ಯತೆಯ ಬಗ್ಗೆ ತಂಡ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಿದೆ. ರಾತ್ರಿ ೮ ಗಂಟೆಗೆ ಕೂಕ್ರಬೆಟ್ಟು ಶಾಲೆಯಲ್ಲಿ ವಾಸವ್ಯ ಹೊಂದಿ ಫೆ. ೩ರಂದು ಬೆಳಿಗ್ಗೆ ೮ ಗಂಟೆಯಿಂದ ಮತ್ತೆ ಮನೆ ಭೇಟಿ  ಕಾರ್ಯ ಮುಂದುವರೆಯಲಿದೆ. ಬೆಳಿಗ್ಗೆ ೯ ಗಂಟೆಯಿಂದ ಶಾಲೆಯಲ್ಲಿ ಶೈಕ್ಷಣಿಕ ಸಂವಾದ ಹಾಗೂ ಊರಿನ ಶಾಲೆ ಉಳಿಸಿ ಬೆಳೆಸುವ ಪ್ರತಿಜ್ಞೆಯೊಂದಿಗೆ ಸಮಾರೋಪ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕೂಕ್ರಬೆಟ್ಟು ಶಾಲೆಗೆ ೬೦ ವರ್ಷಗಳ ಇತಿಹಾಸವಿದೆ. ನೂರಾರು ಮಂದಿಗೆ ವಿದ್ಯಾದಾನವನ್ನು ನೀಡಿದ ಆ ವಿದ್ಯಾದೇಗುಲ ಮಕ್ಕಳ ಕೊರತೆಯಿಂದ ಮುಚ್ಚುವ ಸ್ಥಿತಿಗೆ ತಲುಪಿದೆ. ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ದಶಕಗಳ ಹಿಂದೆ ನೂರಾರು ಮಕ್ಕಳಿದ್ದರು. ಆಂಗ್ಲ ಮಾಧ್ಯಮ ಶಿಕ್ಷಣದ ಪ್ರಭಾವದಿಂದ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಇಳಿಮುಖವಾಗಿದೆ. ಈಗ ಕೇವಲ 16 ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ.

ಮುಚ್ಚುವ ಹಂತದಲ್ಲಿದ್ದ ಬಂಟ್ವಾಳ ತಾಲೂಕಿನ ದಡ್ಡಲಕಾಡು ಶಾಲೆಗೆ ಮರುಜೀವ ನೀಡಿರುವ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿಯ ಅಧ್ಯಕ್ಷ ಪ್ರಕಾಶ್ ಅಂಚನ್ ಅವರು ಇದೀಗ ಕೂಕ್ರಬೆಟ್ಟು ಶಾಲೆ ಉಳಿಸುವತ್ತ ಮುಖ ಮಾಡಿರುವುದು ಗ್ರಾಮದ ಶಿಕ್ಷಣಾಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಈ ಶಾಲೆಯ ಸ್ಥಿತಿಗತಿಯನ್ನು ಅರಿತುಕೊಂಡು, ಅದಕ್ಕೆ ಪುನಶ್ಚೇತನ ನೀಡಲು ಯೋಜನೆ ರೂಪಿಸಲಾಗಿದೆ.  ಅದರಂತೆ ಫೆ.೨ರಂದು ಮರೋಡಿ ಗ್ರಾಮದಲ್ಲಿ ಮನೆ ಮನೆ ಭೇಟಿ, ಗ್ರಾಮ ವಾಸ್ತವ್ಯ ಮತ್ತು ೩ರಂದು ಗ್ರಾಮಸ್ಥರು, ಪೋಷಕರೊಂದಿಗೆ ಸಂವಾದವನ್ನು ಹಮ್ಮಿಕೊಳ್ಳಲಾಗಿದೆ. ಶಾಸಕರು ಸೇರಿದಂತೆ ಜನಪ್ರತಿನಿಧಿಗಳನ್ನು, ಅಧಿಕಾರಿಗಳನ್ನು, ಶಿಕ್ಷಣಾಭಿಮಾನಿಗಳನ್ನು, ಮಕ್ಕಳ ಪೋಷಕರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ