ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಭಾವೈಕ್ಯತಾ ಪ್ರತಿಜ್ಞೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ: ನನ್ನ ಮನೆ, ಸಂಸ್ಥೆ, ಸಮಾಜದಲ್ಲಿ ಆರೋಗ್ಯಕರ, ಉತ್ತಮ ವಾತಾವರಣ ನಿರ್ಮಾಣ ಮಾಡುವಲ್ಲಿ ಸರ್ವರ ಮನ ಒಲಿಸಿ ಪ್ರೇರಣೆ ನೀಡುತ್ತೇನೆ. ನನಗೆ, ನನ್ನ ಕುಟುಂಬಕ್ಕೆ ಹಾಗೂ ನನ್ನ ದೇಶಕ್ಕೆ ಗೌರವ ತರುವ ತತ್ವಗಳನ್ನು ಆಧರಿಸುತ್ತೇನೆ. ಸುಳ್ಳು, ವಂಚನೆ, ಕಳ್ಳತನಗಳಲ್ಲಿ ಭಾಗಿಯಾಗುವ ಯಾವುದೇ ಆಮಿಷಗಳಿಂದ ದೂರವಿರುತ್ತೇನೆ. ಪ್ರಾಮಾಣಿಕ, ವೈಯಕ್ತಿಕ, ಐಕ್ಯತೆ, ಇತರರಿಗೆ ಗೌರವ ನೀಡುವ ಜವಾಬ್ದಾರಿಯನ್ನು ಜೀವನದ ಉದ್ದಕ್ಕೂ ಪಾಲಿಸುತ್ತೇನೆ ಎಂದು ವಚನ ನೀಡುತ್ತೇನೆ. ಈ ಪ್ರಮಾಣವಚನವನ್ನು ನಾನು ಸ್ವ ಇಚ್ಛೆಯಿಂದ ಸ್ವ ಪ್ರೇರಣೆಯಿಂದ ಪಡೆದುಕೊಳ್ಳುತ್ತಿದ್ದೇನೆ.

ಜಾಹೀರಾತು

ಹೀಗೆಂದು ಫೆ.2ರಂದು ಜೇಸಿ ಆಚರಿಸುವ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಯ ಸಂದರ್ಭ ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ ಪದವಿಯ ಎನ್ನೆಸ್ಸೆಸ್ ವಿದ್ಯಾರ್ಥಿಗಳು ಶನಿವಾರ ಪ್ರತಿಜ್ಞೆ ಸ್ವೀಕರಿಸಿದರು.

ವಿಶ್ವವ್ಯಾಪಿಯಾಗಿರುವ ಯುವಕರ ಸ್ವಯಂಸೇವಾ ಸಂಘಟನೆಯಾಗಿರುವ ಜೇಸಿ ರಾಷ್ಟ್ರೀಯ ಭಾವೈಕ್ಯತಾ ದಿನವನ್ನಾಗಿ ಫೆ.2ರಂದು ಆಚರಿಸುತ್ತಿದ್ದು, ಈ ಸಂದರ್ಭ ದೇಶದಾದ್ಯಂತ ಕೋಟ್ಯಂತರ ಯುವಜನರು ವಿಶೇಷವಾಗಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸುತ್ತಾರೆ. ದೇಶದ ಗೌರವವನ್ನು ಕಾಪಾಡುವ ಹಾಗೂ ನೈತಿಕವಾಗಿ ಉತ್ತಮ ತತ್ವಾಧಾರಿತ ಬದುಕು ಸಾಗಿಸುವ ವಿಚಾರಗಳನ್ನು ಈ ಸಂದರ್ಭ ಅಳವಡಿಸಿಕೊಳ್ಳಬೇಕು ಹಾಗೂ ದೇಶದ ಸಮಗ್ರತೆಯನ್ನು ಎತ್ತಿ ಹಿಡಿಯಬೇಕು, ಎಂಬುದು ವ್ಯಕ್ತಿತ್ವ ವಿಕಸನವನ್ನು ಪ್ರಧಾನವಾಗಿಸಿಕೊಂಡ ಜೇಸಿಯ ಆಶಯದಂತೆ ಕಾರ್ಯಕ್ರಮ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಫೆ.2ರಂದು ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಕಲ್ಲಡ್ಕದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಜೋಡುಮಾರ್ಗ ನೇತ್ರಾವತಿ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಅವಕಾಶ ಮತ್ತು ಆಶಾವಾದಿಗಳಾಗಿರಬೇಕು. ಬಂದಂತಹ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಂಡಾಗ ಮಾತ್ರ ನಾವು ಬೆಳೆಯುವುದಕ್ಕೆ ಸಾಧ್ಯವಿದೆ. ರಾಷ್ಟ್ರೀಯ ಭಾವೈಕ್ಯತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮತ್ತು ಪ್ರಜ್ಞೆ  ಮೂಡಿಸುವ ನಿಟ್ಟಿನಲ್ಲಿ ಜೆಸಿಐ ಪ್ರಯತ್ನಿಸುತ್ತಿದೆ ಎಂದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಹರೀಶ ಎ. ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಭಾವೈಕ್ಯತಾ ಪ್ರತಿಜ್ಞೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*