ದ ಕ ಜಿ ಪಂ ಉ ಹಿ ಪ್ರಾ ಶಾಲೆ ಇರಾ ತಾಳಿತ್ತಬೆಟ್ಟುವಿನಲ್ಲಿ ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವಿತರಿಸಿದ ಉಚಿತ ಸೈಕಲ್ ನ್ನು ೮ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ರಜಾಕ್ ಕುಕ್ಕಾಜೆ ಉಪಸ್ಥಿತಿಯಲ್ಲಿ ವಿತರಿಸಲಾಯಿತು.
ಜಾಹೀರಾತು
ಎಸ್ ಡಿ ಎಂ ಸಿ ಅದ್ಯಕ್ಷರಾದ ರಾಜೇಶ್ ಡಿಸೋಜ ಅದ್ಯಕ್ಷತೆ ವಹಿಸಿ ಶುಭ ಕೋರಿದರು. ಗ್ರಾಮ ಪಂಚಾಯತ್ ಸದಸ್ಯರು ಮತ್ತು ಎಸ್ ಡಿ ಎಂ ಸಿ ನಾಮನಿರ್ದೆಸಿತ ಸದಸ್ಯರಾದ ಮೊಯಿದೀನ್ ಕುಂಞ, ಇಲಾಖಾ ಅದಿಕಾರಿ ಗಣೇಶ್, ಎಸ್ ಡಿ ಎಂ ಸಿ ಉಪಾದ್ಯಕ್ಷರಾದ ಚಂದ್ರಿಕಾ ಆರ್, ಕರ್ಕೆರ ಶಾಲಾ ಮುಖ್ಯ ಶಿಕ್ಷಕಿಯಾದ ಸುಜಾತ ಟಿ ಎಸ್ ಮತ್ತು ಇತರ ಶಿಕ್ಷಕರು ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕಿ ಶಶಿ ಬಿ ಸ್ವಾಗತಿಸಿ, ಪದವೀಧರ ಶಿಕ್ಷಕರಾದ ಶಂಕರ ಪ್ರಾಸ್ತಾವಿಕ ನುಡಿದರು. ಶಿಕ್ಷಕಿ ಸುಮಂಗಳಾ ಶರ್ಮಾ ವಂದಿಸಿದರು. ಶಿಕ್ಷಕರಾದ ಜೋನ್ ಆಂತೋನಿ ಪೇರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ"