ಜೋಡುಮಾರ್ಗ ಜೇಸಿ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ಪ್ರತಿಜ್ಞಾ ವಿಧಿ ಬೋಧನೆ


ಜೇಸಿಐ ಭಾರತ ನಿರ್ದೇಶನದಂತೆ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಯ ಪ್ರಯುಕ್ತ ಜೇಸಿಐ ಜೋಡುಮಾರ್ಗ, ಜೇಸಿರೆಟ್ ವಿಭಾಗ ಹಾಗೂ ಯುವ ಜೇಸಿ ವಿಭಾಗದ ಜಂಟಿ ಸಹಯೋಗದಲ್ಲಿ ಜೋಡುಮಾರ್ಗದ ಸುತ್ತಮುತ್ತಲಿನ ವಿವಿಧ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಪ್ರಾಧ್ಯಾಪಕರುಗಳು ಹಾಗು ಸಿಬ್ಬಂದಿಯವರುಗಳಿಗೆ ಫೆ.೨ ರಂದು ಭಾವೈಕ್ಯತಾ ದಿನಾಚರಣೆಯ ಪ್ರಯುಕ್ತ ದೇಶದ ಗೌರವವನ್ನು ಕಾಪಾಡುವ ಹಾಗೂ ನೈತಿಕವಾಗಿ ಉತ್ತಮ ತತ್ವಾಧಾರಿತ ಬದುಕು ಸಾಗಿಸುವ ವಿಚಾರಗಳನ್ನು ಈ ಸಂದರ್ಭ ಅಳವಡಿಸಿಕೊಳ್ಳಬೇಕು ಹಾಗು ದೇಶದ ಸಮಗ್ರತೆಯನ್ನು ಎತ್ತಿ ಹಿಡಿಯಬೇಕು ಎಂಬ ಉದ್ದೇಶದೊಂದಿಗೆ ಪ್ರಮಾಣ ವಚನವನ್ನು ಬೋಧಿಸಲಾಯಿತು.

ಜಾಹೀರಾತು

ಬಂಟ್ವಾಳದ ಎಸ್.ವಿ.ಎಸ್. ಇಂಗ್ಲೀಪ್ ಮೀಡಿಯಂ ಸ್ಕೂಲ್, ವಿದ್ಯಾಗಿರಿ, ಎಸ್.ವಿ.ಎಸ್. ಇಂಗ್ಲೀಪ್ ಮೀಡಿಯಂ ಸ್ಕೂಲ್, ಬಂಟ್ವಾಳ, ಎಸ್.ವಿ.ಎಸ್. ಕಾಲೇಜು ಬಂಟ್ವಾಳ, ಬರಾಕಾ ಇಂಟರ್ ನ್ಯಾಷನಲ್ ಸ್ಕೂಲ್ ಅಡ್ಯಾರ್, ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು, ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಂಚಿ ಕುಕ್ಕಾಜೆ, ಸರಕಾರಿ ಪದವಿ ಪೂರ್ವ ಕಾಲೇಜು ಬೆಂಜನಪದವು, ಸರಕಾರಿ ಪ್ರಾಥಮಿಕ ಶಾಲೆ ಸುರಿಬೈಲು ಕೊಲ್ನಾಡು, ಶ್ರೀ ರಾಮ ಹೈಸ್ಕೂಲ್, ಶ್ರೀ ರಾಮ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ರಾಮ ಪ್ರಥಮ ದರ್ಜೆ ಕಾಲೇಜು ಕಲ್ಲಡ್ಕ, ಶ್ರೀ ವಾಣಿ ವಿಜಯ ಹೈಸ್ಕೂಲು ಮಂಜೇಶ್ವರ, ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ ವಳಚ್ಚಿಲ್, ಎಸ್‌ಡಿಎಂ ಕಾಲೇಜು ಉಜಿರೆ, ಸೈಂಟ್ ಅಲೋಸಿಯಸ್ ಕಾಲೇಜು ಮಂಗಳೂರು, ಸರಕಾರಿ ಪ್ರೌಢಶಾಲೆ ಮೋಂತಿಮಾರು, ಸರಕಾರಿ ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜು ವಗ್ಗ, ಸರಕಾರಿ ಪ್ರೌಢಶಾಲೆ ಸಜೀಪ, ದೀಪಿಕಾ ಪ್ರೌಢಶಾಲೆ, ಮೊಡಂಕಾಪು, ಸರಕಾರಿ ಪ್ರೌಢ ಶಾಲೆ ಕೊಡಂಗೆ, ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಸ್ಕೂಲ್ ಅಡ್ಯಾರು ಈ ಎಲ್ಲಾ ಶಾಲೆಯ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿಗಳಿ ಹೀಗೆ ಸುಮಾರು ೧೫,೦೦೦ ಕ್ಕೂ ಹೆಚ್ಚು ಮಂದಿಗಳಿಗೆ ಈ ದಿನ ಪ್ರತಿಜ್ಷಾ ವಿಧಿ ಬೋಧಿಸಲಾಯಿತು.
ಜೇಸಿಐ ಜೋಡುಮಾರ್ಗದ ಅಧ್ಯಕ್ಷ ಹರ್ಷರಾಜ್ ಸಿ, ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಉಪಾಧ್ಯಕ್ಷರುಗಳಾದ ಜಯರಾಜ್ ಎಸ್.ಬಂಗೇರ, ಧೀರಜ್ ಎಚ್, ಗಾಯತ್ರಿ ಲೋಕೇಶ್, ಹರಿಪ್ರಸಾದ್ ಕುಲಾಲ್, ಶನ್ಫತ್ ಷರೀಫ್, ಜೇಸಿರೆಟ್ ಅಧ್ಯಕ್ಷೆ ಜೇಸಿ ಅಮಿತಾ ಹರ್ಷರಾಜ್, ಜೇಜೇಸಿ ಅಧ್ಯಕ್ಷ ಜೇಜೇಸಿ ರೋನಿತ್, ನಿರ್ದೇಶಕರುಗಳಾದ ಸುಧಾಕರ ವೈ, ಸುಮನಾ ಎಸ್, ಆಶಿಕ್ ಕುಕ್ಕಾಜೆ, ಜೇಸಿ ಅಬ್ದುಲ್ ಸತ್ತಾರ್, ವೈಶಾಕ್, ಖಜಾಂಜಿಯಾದ ಹರಿಶ್ಷಂದ್ರ ಆಳ್ವ ಸದಸ್ಯರುಗಳಾದ ಬಾಲಚಂದ್ರ ಆಳ್ವ ಹಾಗೂ ಇನ್ನಿತರ ಪದಾಧಿಕಾರಿಗಳು ಮತ್ತು ಸದಸ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜೋಡುಮಾರ್ಗ ಜೇಸಿ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ಪ್ರತಿಜ್ಞಾ ವಿಧಿ ಬೋಧನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*