ಬಂಟ್ವಾಳದಲ್ಲಿ ಶಹರಿ ಸಮೃದ್ಧಿ ಉತ್ಸವ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಸರಕಾರದ ವಿವಿಧ ಯೊಜನೆಗಳ ಬಗ್ಗೆ ಜನರಿಗೆ  ಮಾಹಿತಿ ನೀಡಿ ಅವರನ್ನು ಸ್ವಸಹಾಯ ಸಂಘಗಗಳ ಮೂಲಕ ಸಂಘಟಿಸಿ ಆರ್ಥಿಕವಾಗಿ ಬಲಾಢ್ಯ ಗೊಳಿಸುವ  ಉದ್ದೇಶವನ್ನಿಟ್ಟುಕೊಂಡು ಶಹರಿ ಸಮೃದ್ದಿ ಉತ್ಸವವನ್ನು ಆಚರಿಸಲಾಗುತ್ತದೆ. ದ.ಕ. ಜಿಲ್ಲೆಯ 10 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫೆ. 1ರಿಂದ ಫೆ.15ರವರೆಗೆ ಶಹರಿ ಸಮೃದ್ದಿ ಉತ್ಸವಗಳು ನಡೆಯುತ್ತದೆ ಜಿಲ್ಲಾ ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಅಭಿಯಾನ ವ್ಯವಸ್ಥಾಪಕಿ ಐರಿನ್ ರೆಬೆಲ್ಲೋ ಹೇಳಿದರು.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬಂಟ್ವಾಳ ಪುರಸಭೆ ಇದರ ವತಿಯಿಂದ ರೋಟರಿ ಕ್ಲಬ್ ಸಹಯೋಗದೊಂದಿಗೆ  ದೀನದಯಾಳ್ ಅಂತ್ಯೋದಯ ಯೊಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಮಂಗಳವಾರ ಬಿ.ಸಿ.ರೋಡಿನ ರೋಟರಿ ಸಭಾ ಭವನದಲ್ಲಿ ನಡೆದ ಶಹರಿ ಸಮೃದ್ದಿ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಸಹಾಯ ಸಂಘಗಳ ಮೂಲಕ ಜನರ ಆರ್ತೀಕ ಮತ್ತು ಸಾಮಾಜಿಕ ಜೀವನವನ್ನು ಸುಧಾರಿಸುವ ನಿಟ್ಟನಲ್ಲಿ ಹಲವಾರು ಯೋಜನೆಗಳು ಜಾರಿಯಲ್ಲಿದೆ. ಬ್ಯಾಂಕ್ ಸಾಲ ಶಿಬಿರ, ಕುಟುಂಬಗಳ ಸಮಗ್ರ ಸಮೀಕ್ಷೆ, ನಗರ ವ್ಯಾಪ್ತಿಯಲ್ಲಿ ರಾತ್ರಿ ವಸತಿ ರಹಿತರಿಗೆ ವಸತಿ ಸೌಲಭ್ಯಗಳಿದ್ದರೂ ಅರ್ಹರಿಗೆ ಯೋಜನೆಯ ಸದುಪಯೋಗ ಪಡೆಯಲು ಸಾಧ್ಯವಾಗದೇ ಇರುವುದು ವಿಪರ್ಯಾಸ ಎಂದರು.

ವೇದಿಕೆಯಲ್ಲಿ  ಶಿಶು ಅಭಿವೃದ್ದಿ ಇಲಾಖೆಯ ಹಿರಿಯ ಮೇಲ್ವಿಚಾರಕಿ ಭಾರತಿ, ಜಿಲ್ಲಾ ನಗರಾಭಿವೃದ್ದಿ ಕೋಶದ  ಇಂಜಿನಿಯರ್ ಗಿರೀಶ್, ಎಚ್‌ಡಿಎಫ್‌ಸಿ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಹೃಷಿಕೇಶ್ ಕುಂಬ್ಲೆ, ಪುರಸಭೆಯ ಸಹಕಾರಿ ಸಂಘದ ಅಧ್ಯಕ್ಷೆ ವಸಂತಿ ಗಂಗಾಧರ, ಆಯುಷ್ಮಾನ್ ಭಾರತ್‌ನ ಜಿಲ್ಲಾ ಸಂಚಾಲಕ  ಡಾ. ಜಗನ್ನಾಥ್, ಗ್ಯಾಸ್ ಏಜೆನ್ಸಿಗಳ ಸಂಪನ್ಮೂಲ ವ್ಯಕ್ತಿ ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.

ಪುರಸಭೆಯ ಮುಖ್ಯಾಧಿಕಾರಿ ರೇಖಾ ಶೆಟ್ಟಿ ಸ್ವಾಗತಿಸಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಜಯಲಕ್ಷ್ಮೀ ವಂದಿಸಿದರು.  ಪುರಸಭೆ ಸಮುದಾಯ ಸಂಘಟಕಿ ಉಮಾವತಿ ಕಾರ್ಯಕ್ರಮ ನಿರೂಪಿಸಿದರು.

ವಿವಿಧ ಸಹಕಾರಿ ಯೋಜನೆಗಳ ಅರಿವು ಮೂಡಿಸುವ ಕಾರ್ಯಗಾರ ಹಾಗೂ ಸೌಲಭ್ಯ ವಿತರಣೆ ನಡೆಯಿತು. ಸಭಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಬಿ.ಸಿ.ರೋಡಿನ ರಕ್ತೇಶ್ವರೀ ದೇವಸ್ಥಾನದ ಬಳಿಯಿಂದ ರೋಟರಿ ಸಭಾ ಭವನದವರೆಗೆ ಜಾಗೃತಿ ಜಾಥ ನಡೆಯಿತು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳದಲ್ಲಿ ಶಹರಿ ಸಮೃದ್ಧಿ ಉತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*