ಬಂಟ್ವಾಳ

ಜಿಎಸ್‌ಬಿ ಸಮ್ಮಿಲನದಲ್ಲಿ ಕ್ರೀಡೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮ

ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ (ರಿ.), ಬಿ.ಸಿ.ರೋಡು ಆಶ್ರಯದಲ್ಲಿ 18ನೇ ವರ್ಷದ ಜಿ.ಯಸ್.ಬಿ. ಸಮ್ಮಿಲನ-2019 ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ವಾರ್ಷಿಕ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಸೇವಾ ಸಮಿತಿಯ ಅಧ್ಯಕ್ಷ ಯು. ಸುರೇಶ್ ನಾಯಕ್ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಜಾಹೀರಾತು

ನೂತನ ಭಟ್ ಮತ್ತು ಚೈತನಾ ಪ್ರಾರ್ಥಿಸಿದರು. ನಿವೃತ್ತ ಮುಖ್ಯ ಶಿಕ್ಷಕಿ ಜಯಶ್ರೀ ಶೆಣೈ, ನಿವೃತ್ತ ಉಪನ್ಯಾಸಕ ಮಧುಕರ ಮಲ್ಯ, ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ವಾಮನ ಭಟ್ ಹಾಗೂ ರಾಧಿಕಾ ಶೆಣೈ ತೀರ್ಪುಗಾರರಾಗಿ ಸಹಕರಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಕ್ಷಿ ಹೆಗ್ಡೆ ಉಸ್ತುವಾರಿಯಲ್ಲಿ ಸ್ಥಳೀಯ ಜಿ.ಯಸ್.ಬಿ. ಪ್ರತಿಭೆಗಳಿಂದ ಯಕ್ಷಗಾನ ಹಾಗೂ ವಿವಿಧ ನೃತ್ಯಗಳು, ಮಂಗಳೂರಿನ ಮಾಲತಿ ಯು. ಕಾಮತ್ ಮತ್ತು ಬಳಗದವರಿಂದ ಕೊಂಕಣಿ ನಾಟಕ ಪ್ರದರ್ಶನವಾಯಿತು.

ಬಳಿಕ ಸ್ಪರ್ಧಾ ವಿಜೇತರಿಗೆ ಸಮಿತಿಯ ಅಧ್ಯಕ್ಷ ಡಾ| ಕೆ.ಜಿ. ಶೆಣೈ ಬಹುಮಾನ ವಿತರಿಸಿದರು. ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಪೈ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ರಘುವೀರ್ ಕಾಮತ್, ಸದಸ್ಯರಾದ ದುರ್ಗಾದಾಸ್ ಶೆಣೈ, ನಾಗೇಂದ್ರ ನಾಯಕ್, ನಾರಾಯಣ ಶೆಣೈ, ವಿವೇಕ್ ಹೆಗ್ಡೆ, ಅನಂತಕೃಷ್ಣ ನಾಯಕ್, ಎಚ್. ನಾರಾಯಣ ಶೆಣೈ, ಪವನ್ ನಾಯಕ್, ಶಿಕ್ಷಕಿ ರಂಜಿತಾ ಕುಮಾರ್ ಭಟ್ ಹಾಗೂ ಸ್ವಾತಿ ನಾಯಕ್ ಸಹಕರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ