ವಿಟ್ಲ

ಫೆ.14, 15ರಂದು ತುಳುನಾಡ ಜಾತ್ರೆ 2019, ಶ್ರೀ ಒಡಿಯೂರು ರಥೋತ್ಸವ

  • ತುಳುವರು ಒಟ್ಟಾದರೆ ತುಳುಶಕ್ತಿಯ ವಿಶ್ವರೂಪ ದರ್ಶನ – ಒಡಿಯೂರು ಶ್ರೀಗಳು

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ವಿಡಿಯೋಗಾಗಿ ಕ್ಲಿಕ್ ಮಾಡಿರಿ:

ಒಡಿಯೂರು ವರದಿ: ತುಳುವರು ಒಟ್ಟಾದಾಗ ಮಾತ್ರ ತುಳುವರ ಶಕ್ತಿಯ ವಿಶ್ವರೂಪ ದರ್ಶನವಾಗಲು ಸಾಧ್ಯ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು.

ಜಾಹೀರಾತು

ಶುಕ್ರವಾರ ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದಲ್ಲಿ ಫೆ.14 ಮತ್ತು 15 ರಂದು ನಡೆಯಲಿರುವ ತುಳು ಸಾಹಿತ್ಯ ಸಮ್ಮೇಳನ ಮತ್ತು ತುಳುನಾಡ್ದ ಜಾತ್ರೆಒಡಿಯೂರು ರಥೋತ್ಸವದ ರೂಪುರೇಷೆಯ ಬಗ್ಗೆ ನಡೆದ ಸಭೆಯಲ್ಲಿ ಆಶೀರ್ವಚನ ನೀಡಿದರು. ಫೆ.14ರಂದು ಸಂಶೋಧಕಿ, ಸಾಹಿತಿ ಡಾ. ಇಂದಿರಾ ಹೆಗ್ಗಡೆ ಅಧ್ಯಕ್ಷತೆಯಲ್ಲಿ ನಡೆಯುವತುಳು ಬದ್ಕ್ ನಿಲೆಬಿಲೆ ವಿಚಾರದ ಅಡಿಯಲ್ಲಿ ತುಳು ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದಲ್ಲಿ ಪುರಾತನ ತುಳು, ನಡುಗಾಲದ ತುಳು, ಆಧುನಿಕ ತುಳು ಭಾಷೆ ಬೆಳೆದು ಬಂದ ಬಗ್ಗೆ ವಿಮರ್ಶೆ ನಡೆಯಲಿದೆ. ಇದೇ ಸಂದರ್ಭದಲ್ಲಿ ತುಳು ಭಾಷಾಭಿಮಾನಿಗಳಿಗೆ ಪೂರಕವಾಗಿಅದೃಷ್ಟ ತುಳುವೆ ಬಂಗಾರ್ ಪೆಜುವೆ ಎಂಬ ಕಾರ್ಯಕ್ರಮ ವಿಶೇಷವಾಗಿ ನಡೆಯಲಿದೆ. ಫೆ.15ರಂದು ಎರಡು ಗ್ರಾಮಗಳನ್ನು ಸಂಧಿಸುವ ವಿಶಿಷ್ಟ ರಥೋತ್ಸವ ನಡೆಯಲಿದೆ ಎಂದು ತಿಳಿಸಿದರು.

ತುಳು ಸಮ್ಮೇಳನದ ಸಂಚಾಲಕ ಡಾ. ವಸಂತಕುಮಾರ್ ಪೆರ್ಲ ಸಮ್ಮೇಳನದಲ್ಲಿ ನಡೆಯುವ ನಾನಾ ಗೋಷ್ಠಿಗಳ ಬಗ್ಗೆ ವಿವರಣೆ ನೀಡಿದರು. ಸಂದರ್ಭ ಒಡಿಯೂರು ತುಳು ಕೂಟದ ಸ್ಥಾಪಕ ಅಧ್ಯಕ್ಷ ಮಲಾರ್ ಜಯರಾಮ ರೈ, ಸ್ವಾಗತ ಸಮಿತಿಯ ಸಂಚಾಲಕ ವಾಸುದೇವ ಆರ್. ಕೊಟ್ಟಾರಿ, ಹೊರೆ ಕಾಣಿಕೆ ಸಮಿತಿ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಅನಂತಾಡಿ, ಸ್ವಯಂಸೇವಕ ಸಮಿತಿ ಸಂಚಾಲಕ ಸದಾಶಿವ ಅಳಿಕೆ ಮಾತನಾಡಿ, ತುಳುನಾಡ ಜಾತ್ರೆ, ರಥೋತ್ಸವದ ಸಿದ್ಧತೆಗಳ ಮಾಹಿತಿ ನೀಡಿದರು. ಆರ್ಥಿಕ ಸಮಿತಿ ಸಂಚಾಲಕ . ಸುರೇಶ್ ರೈ, ಶ್ರೀಗುರುದೇವ ವಿದ್ಯಾ ಸಂಸ್ಥೆಗಳ ಸಂಚಾಲಕ ಗಣಪತಿ ಭಟ್ ಸೇರಾಜೆ, ಒಡಿಯೂರು ಶ್ರೀವಜ್ರಮಾತಾ ಮಹಿಳಾ ಸೇವಾ ಸಮಿತಿ ಅಧ್ಯಕ್ಷ ಸರ್ವಾಣಿ ಪಿ. ಶೆಟ್ಟಿ, ಶ್ರೀ ಸಂಸ್ಥಾನದ ಕಾರ್ಯನಿರ್ವಾಹಕ ಪದ್ಮನಾಭ ಒಡಿಯೂರು ಉಪಸ್ಥಿತರಿದ್ದರು. ಪ್ರಚಾರ ಸಮಿತಿ ಸಂಚಾಲಕ ಅಜಿತ್ಕುಮಾರ್ ಶೆಟ್ಟಿ ಸ್ವಾಗತಿಸಿದರು. ಸ್ವಯಂಸೇವಕ ಸಮಿತಿ ಸಂಚಾಲಕ ಸದಾಶಿವ ಅಳಿಕೆ ವಂದಿಸಿದರು. ಯಶವಂತ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ