ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ರಕ್ತಸಂಬಂಧದಲ್ಲಿ ಮದುವೆಗಳಾದಾಗ ಉಂಟಾಗುವ ಸಮಸ್ಯೆಯೊಂದನ್ನು ಆಧರಿಸಿದ ಕಥಾವಸ್ತುವನ್ನು ಹೊಂದಿರುವ ಚಲನಚಿತ್ರದಲ್ಲಿ ಬಂಟ್ವಾಳದ ಯುವಕರು ಪ್ರಮುಖ ಪಾತ್ರದಲ್ಲಿದ್ದಾರೆ. ಹಲವಾರು ಭಾಷೆಗಳ ಸಿನಿಮಾಗಳಿಗೆ ಸಂಗೀತ ಸಂಯೋಜಕರಾಗಿರುವ
ತುಮುಲ ಎಂಬ ಹೆಸರಿನ ಈ ಚಲನಚಿತ್ರದ ಮುಖ್ಯ ಪಾತ್ರದಲ್ಲಿ ಕೊಂಕಣಿ, ತುಳು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ನಟ ಸುಬ್ರಹ್ಮಣ್ಯ ಪೈ ನಟಿಸಿದ್ದಾರೆ. ಇವರೊಂದಿಗೆ ವಂದಿತಾ ಕುಡ್ವ, ಕೃತಿ ಕಾರಂತ್, ವೀಣಾ ಪಂಡಿತ್ ಶ್ರುತಿ ಸುವರ್ಣ ಮತ್ತು ಶಿವಶಂಕರ ಮಯ್ಯ ಅಭಿನಯಿಸಿದ್ದಾರೆ. ಪಡ್ಡಾಯಿ ಖ್ಯಾತಿಯ ಸದಾಶಿವ ನೀನಾಸಂ ನಿರ್ದೇಶನ ತಾಂತ್ರಿಕ ನಿರ್ವಹಣೆ ಬಾಲಸುಬ್ರಹ್ಮಣ್ಯ ನೂಜಿ, ಶಶಿಕುಮಾರ್ ಮತ್ತು ಸತೀಶ್ ಬಿ ವಹಿಸಿದ್ದಾರೆ. ಸಾಹಿತ್ಯ ಅನುಶ್ರೀ ಪುತ್ತೂರಾಯ ಅವರದ್ದು.