ಯಕ್ಷಗಾನ

ಆರಾಧನಾ ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಇಲ್ಲಿನ ಬೈಪಾಸ್ ಆರಾಧನಾ  ಫ್ರೆಂಡ್ಸ್ ಸರ್ಕಲ್ ಇದರ ೩೧ನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಯಕ್ಷಗಾನ ಬಯಲಾಟ ಹಾಗೂ ಆರಾಧನಾ ಪ್ರಶಸ್ತಿ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಂಟ್ವಾಳದಲ್ಲಿ ನಡೆಯಿತು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ತೆಂಕುತಿಟ್ಟಿನ ಹಿರಿಯ ಹಾಸ್ಯ ಕಲಾವಿದ ಸೀತಾರಾಮ ಕುಮಾರ್ ಕಟೀಲು ಅವರಿಗೆ ಯಕ್ಷಗಾನ ಪೋಷಕ ದಿ. ಮರಿಯಪ್ಪಯ್ಯ ಹೊಳ್ಳ ಕಳ್ಳಿಮಾರು ಅವರ ಸ್ಮರಣಾರ್ಥ ಆರಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಿವೃತ್ತ ಪ್ರಾದ್ಯಾಪಕ ಡಾ| ಶಿವರಾಮ ಹೊಳ್ಳ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಹಿರಿಯ ಕಲಾವಿದರನ್ನು ಗುರುತಿಸಿ ಗೌರವಿಸುವುದರಿಂದ ಅವರ ಕಲಾಸೇವೆಗೆ ಮತ್ತಷ್ಟು ಉತ್ತೇಜನ ನೀಡಿದಂತಾಗುತ್ತದೆ. ಕಿರಿಯ ಕಲಾವಿದರಿಗೆ ಮುಂದಕ್ಕೆ ಬರಲು ಪ್ರೇರಣೆಯಾಗುತ್ತದೆ. ವರ್ಷಂಪ್ರತಿ ಪ್ರಶಸ್ತಿ ನೀಡುವ ಮೂಲಕ ಆರಾಧನಾ ಫ್ರೆಂಡ್ಸ್ ಸರ್ಕಲ್ ಉತ್ತಮ ಕಾರ್ಯ ನಡೆಸುತ್ತಿದೆ ಎಂದರು.

ಜಾಹೀರಾತು

ಈ ಸಂದರ್ಭದಲ್ಲಿ ಎಸೆಸ್ಸೆಲ್ಸಿಯಲ್ಲಿ  ಎಸ್‌ವಿಎಸ್ ವಿದ್ಯಾಗಿರಿ ಶಾಲೆಗೆ ಪ್ರಥಮ ಸ್ಥಾನಿಯಾದ ವಿಧಾತ್ರಿ ಸೋಮಯಾಜಿ ಅವರಿಗೆ ಪ್ರತಿಭಾ ಪುರಸ್ಕಾರ, ಸಮ್ಮಾನ ನಡೆಸಲಾಯಿತು.

ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ವಿಶ್ವನಾಥ ಎ., ನಿವೃತ್ತ ಸೇನಾಆiಕಾರಿ ಗಣಪತಿ ಸೋಮಯಾಜಿ, ಫ್ರೆಂಡ್ಸ್ ಸರ್ಕಲ್ ಪದಾಽಕಾರಿಗಳಾದ ನರೇಶ್ ಕುಮಾರ್ ಕಳ್ಳಿಮಾರ್, ಗಣೇಶ್, ಯೋಗೀಶ್, ಪ್ರಕಾಶ್, ಪೃಥ್ವಿರಾಜ್, ಸಂಜೀವ ಕೊಟ್ಟಾರಿ, ರಾಮಚಂದ್ರ ಮಯ್ಯ, ಸುರೇಶ್ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕ ಪರಮೇಶ್ವರ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ