ಬಂಟ್ವಾಳ

ಅನರ್ಹ ಬಿಪಿಎಲ್ ಕಾರ್ಡ್ 25ರೊಳಗೆ ಒಪ್ಪಿಸಿ ಅಥವಾ ಪರಿಣಾಮ ಎದುರಿಸಿ – ತಹಶೀಲ್ದಾರ್

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲವು ಬಿಪಿಎಲ್ ಪಡಿತರ ಚೀಟಿಗಳು ಅನರ್ಹರಿಗೆ ದೊರಕುತ್ತಿದ್ದು, ಅವುಗಳ ಸವಲತ್ತುಗಳನ್ನು ಉಪಯೋಗಿಸುವುದು ಕಂಡುಬಂದಿದ್ದು, ಅವುಗಳನ್ನು ಹೊಂದಿರುವವರು ಸ್ವಯಂಪ್ರೇರಿತರಾಗಿ ಫೆ.25ರೊಳಗೆ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ತಂದೊಪ್ಪಿಸಬೇಕು, ಇಲ್ಲವಾದರೆ, ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ರಶ್ಮಿ ಸೂಚಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕೆಲವು ಪಡಿತರ ಚೀಟಿದಾರರು ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದಿದ್ದರೆ, ಇನ್ನು ಕೆಲವರು ಬಿಪಿಎಲ್ ಪಡಿತರ ಚೀಟಿ ಪಡೆದ ನಂತರ ಬಿಪಿಎಲ್ ಗೆ ಅನರ್ಹರಾಗಿರುವುದು ಕಂಡುಬಂದಿದೆ. ನಾಲ್ಕು ಚಕ್ರದ ಬಿಳಿ ನಂಬರ್ ಪ್ಲೇಟ್ ವಾಹನ ಹೊಂದಿರುವವರು, ಕುಟುಂಬದಲ್ಲಿ ಸರಕಾರಿ ಅಥವಾ ಅರೆಸರಕಾರಿ ಉದ್ಯೋಗ ಹೊಂದಿರುವವರು, ಆದಾಯ ತೆರಿಗೆ ಪಾವತಿಸುವವರು, ಪಡಿತರ ಚೀಟಿ ವಿಳಾಸದಲ್ಲಿ ವಾಸ್ತವ್ಯದಲ್ಲಿ ಇರುವವರು, ಒಂದೇ ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವವರು, ಮರಣ ಹೊಂದಿದವರ, ಕುಟುಂಬದಲ್ಲಿ ವಾಸವಿಲ್ಲದೇ ಇರುವವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೇ ಇರುವುದು, 7.5 ಎಕ್ರೆಗಿಂತ ಹೆಚ್ಚಿನ ಡಿ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿರುವವರು, ವಾರ್ಷಿಕ ಆದಾಯ 1,2 ಲಕ್ಷಕ್ಕಿಂತ ಹೆಚ್ಚು ಹೊಂದಿರುವ ಕುಟುಂಬ, ನಗರ ಪ್ರದೇಶಗಳಲ್ಲಿ 1 ಸಾವಿರ ಚ.ಅಡಿಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ಮನೆ ಹೊಂದಿರುವವರಿಗೂ ಬಿಪಿಎಲ್ ಪಡಿತರ ಚೀಟಿ ಹಾಗೂ ಅಂತ್ಯೋದಯ ಚೀಟಿ ಇರುವುದು ಕಂಡುಬಂದರೆ ಅವುಗಳನ್ನು ಫೆ.25ರೊಳಗೆ ತಂದೊಪ್ಪಿಸಬೇಕು ಎಂದು ಅವರು ತಿಳಿಸಿದ್ದಾರೆ.

 

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.