ಬಂಟ್ವಾಳ

ಬಂಟ್ವಾಳ: ಸಂತ ಶ್ರೀ ಸೇವಾಲಾಲ ಜಯಂತಿ ಆಚರಣೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ: ಸಂತ ಸೇವಾಲಾಲರ ಸರ್ವರಿಗೂ ಹಿತವನ್ನು ಬಯಸುವ ಗುಣ ನಮಗೆಲ್ಲರಿಗೂ ಆದರ್ಶವಾಗಬೇಕು ಎಂದು ಬಂಟ್ವಾಳ  ತಹಶೀಲ್ದಾರ್ ರಶ್ಮಿ ಹೇಳಿದರು.

ಜಾಹೀರಾತು

ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ನಡೆದ, ಸಂತ ಶ್ರೀ ಸೇವಾಲಾಲ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಂತ ಸೇವಾಲಾಲರ ಹೆಸರಲ್ಲಿಯೇ ‘ಸೇವೆ’ ಎಂಬ ಪದವಿದ್ದು ಬಂಜಾರ ಸಮುದಾಯ ಸೇರಿದಂತೆ ಎಲ್ಲಾ ಸಮುದಾಯದ ಸೇವೆಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡವರಾಗಿರುತ್ತಾರೆ ಎಂದು ಹೇಳಿದರು.

ಬಂಜಾರ ಸಮುದಾಯಕ್ಕೆ ಮಾರ್ಗದರ್ಶಕರಿಲ್ಲದ ವೇಳೆಯಲ್ಲಿ ಕುಲಗುರುಗಳಾಗಿ ಮಾರ್ಗದರ್ಶಕರಾಗಿ ಬಂದವರು ಸಂತ ಶ್ರೀ ಸೇವಾಲಾಲರು ಎಂದು ಕರಾವಳಿ ಲಂಬಾಣಿ (ಬಂಜಾರ) ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿಯವರಾದ ರಮೇಶ್ ಪಿ ನಾಯ್ಕ್ ಸಂತ ಶ್ರೀ ಸೇವಾಲಾಲರ ಜೀವನದ ಸಂದೇಶವನ್ನು ವಿವರಿಸಿದರು.

ಬಂಜಾರ ಸಂಘದ ತಾಲೂಕು ಪ್ರತಿನಿಧಿ ತಾರೇಶ ನಾಯ್ಕ, ಲೋಕ ನಾಯ್ಕ ‌ತಾಲೂಕು ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಪ್ರಭಾರ ಉಪತಹಶೀಲ್ದಾರ್ ಗ್ರೆಟ್ಟಾ ಮಸ್ಕರೇಞಂಸ್, ಆಹಾರ ಶಾಖೆಯ ಶ್ರೀನಿವಾಸ್,  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಸಾರ್ವಜನಿಕರು  ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.