ಬಂಟ್ವಾಳ

ಓದುವ ಹವ್ಯಾಸ: ಬಂಟ್ವಾಳದಲ್ಲಿ ಕಾರ್ಯಾಗಾರ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಗ್ರಂಥಾಲಯಗಳಲ್ಲಿರುವ ಪುಸ್ತಕಗಳನ್ನು ಓದುವ ಮೂಲಕ ವಿದ್ಯಾರ್ಥಿಗಳು ಜ್ಞಾನಮುಖಿಗಳಾಗಬಹುದು ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ರಾಮ ಕೆ. ಹೇಳಿದ್ದಾರೆ.

ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ವಿಭಾಗ ಮತ್ತು ಸಾಹಿತ್ಯ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಓದುವ ಹವ್ಯಾಸ ಕುರಿತ ಕಾರ್ಯಗಾರದಲ್ಲಿ ಮಾತನಾಡಿದರು.

ಆಧುನಿಕ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಪರಾಮರ್ಶನ ಗ್ರಂಥಗಳಿಗೆ ಬಹಳ ಮಹತ್ವವಿದೆ.  ಪಠ್ಯಕ್ಕೆ ನೇರವಾಗಿ ಸಂಬಂಧ ಪಡದಿದ್ದರೂ ಜ್ಞಾನರ್ಜನೆಗಾಗಿ ಓದಬೇಕಾದ ಪುಸ್ತಕಗಳು ದಿನನಿತ್ಯ ಪ್ರಕಟವಾಗುತ್ತಿವೆ. ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ಓದುವ ಮೂಲಕ ವಿದ್ಯಾರ್ಥಿಗಳು ಜ್ಞಾನಮುಖಿ ವ್ಯಕ್ತಿತ್ವ ರೂಢಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಜಾಹೀರಾತು

ಬೆಳಂದೂರು ಸರಕಾರಿ ಪ್ರಥಮದರ್ಜೆಕಾಲೇಜಿನ ಗ್ರಂಥಪಾಲಕ ಡಾ. ರವಿಚಂದ್ರ ನಾಯಕ್ ಮಾತನಾಡಿ ಅಂತರ್ಜಾಲದಲ್ಲಿ ಲಭ್ಯವಿರಿರುವ ಪುಸ್ತಕಗಳನ್ನು ಬಳಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಉಚಿತವಾಗಿ ಮಾಹಿತಿಯನ್ನು ಪಡೆಯಬಹುದು ಎಂದು ತಿಳಿಸಿದರು.

ಇತಿಹಾಸ ವಿಬಾಗದ ಮುಖ್ಯಸ್ಥ ಪ್ರೊ. ಸತೀಶ್ಗಟ್ಟಿ ಅಧ್ಯಕ್ಷತೆ ವಹಿಸಿದರು. ಕಾಲೇಜಿನ ಗ್ರಂಥಪಾಲಕ ಪುಟ್ಟೇಗೌಡ ಹೆಚ್ ಸಿ ಕಾರ್ಯಕ್ರಮ ಸಂಯೋಜಿಸಿದರು. ಸುಶ್ಮಿತಾ ಸ್ವಾಗತಿಸಿ, ಮಮತಾ ಕಾರ್ಯಕ್ರಮ ನಿರೂಪಿಸಿದರು, ಶಿಲ್ಪ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ