Categories: ಬಂಟ್ವಾಳ

ಬಂಟ್ವಾಳ ತಾಲೂಕು ಮಟ್ಟದ ಶಿವಾಜಿ ಜಯಂತಿ ಆಚರಣೆ

ಬಂಟ್ವಾಳ ತಾಲೂಕು ಮಟ್ಟದ ಶಿವಾಜಿ ಜಯಂತಿ ಆಚರಣೆ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಂಗಳವಾರ ನಡೆಯಿತು.

ಜಾಹೀರಾತು

ಶಿವಾಜಿ ಜೀವನ ಸಾಧನೆ ನಮ್ಮ ಜೀವನಕ್ಕೆ ಸ್ಪೂರ್ತಿಯಾಗಿದೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ಹೇಳಿದರು. ಧೈರ್ಯ ಸಹನೆ ಮುಂತಾದ ಆಧ್ಯಾತ್ಮಿಕ ಗುಣಗಳ ಬಲದಲ್ಲಿ ರಾಜ್ಯ ಸ್ಥಾಪನೆ ಮಾಡಿದ ಶಿವಾಜಿ ಮರಾಠರಲ್ಲಿ ಧೈರ್ಯ ತುಂಬಿ ಆದರ್ಶ ರಾಜನಾದನು, ಶಕ್ತಿ ಮತ್ತು ಯುಕ್ತಿಗಳು ಇದ್ದಲ್ಲಿ ವಿರೋಧಿಗಳು ಪ್ರಬಲರಾಗಿದ್ದರೂ ಧೈರ್ಯದಿಂದ ಎದುರಿಸಿ

ಸೋಲಿಸ ಬಹುದೆಂಬುವುದಕ್ಕೆ ಛತ್ರಪತಿ ಶಿವಾಜಿ ಮಾದರಿಯಾಗಿದ್ದಾರೆ ಎಂದು ಅವರು ಹೇಳಿದರು.

ಪ್ರಥಮ ದರ್ಜೆ ಸಹಾಯಕ ಪ್ರಸನ್ನ ಪಕ್ಕಳ ಶಿವಾಜಿಯವರ ಜೀವನ ಸಂದೇಶವನ್ನು ವಿವರಿಸಿದರು. ತಾಲೂಕು  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶು ಕುಮಾರ್, ತಾಲೂಕು ಕಚೇರಿ ಸಿಬಂದಿ, ಗ್ರಾಮ ಕರಣಿಕರು, ಗ್ರಾಮ ಸಹಾಯಕರು, ಸಾರ್ವಜನಿಕರು ಉಪಸ್ಥಿತರಿದ್ದರು, ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ಸ್ವಾಗತಿಸಿ, ದ್ವಿತೀಯ ದರ್ಜೆ ಸಹಾಯಕಿ ಶ್ವೇತ ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.