Categories: ವಿಟ್ಲ

ಎಸ್ಕೆಎಸ್ಸೆಸ್ಸೆಫ್ ಕನ್ಯಾನ ಶಾಖೆಯ ಪ್ರಥಮ ವಾರ್ಷಿಕೋತ್ಸವ, ಮತಪ್ರವಚನ, ಮಜ್ಲಿಸ್ನ್ನೂರ್

ಎಸ್ಕೆಎಸ್ಸೆಸ್ಸೆಫ್ ಕನ್ಯಾನ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಏಕದಿನದ ಮತಪ್ರವಚನ, ಮಜ್ಲಿಸ್‌ನ್ನೂರ್ ಹಾಗೂ ಮಹಾಸಂಗಮ ಕನ್ಯಾನದ ಗೋಳಿಕಟ್ಟೆಯ ಹಝ್ರತ್ ಶಾಹುಲ್ ಹಮೀದ್ ವಲಿಯುಲ್ಲಾ ನಗರದ ಶಂಸುಲ್ ಉಲಮಾ ವೇದಿಕೆಯಲ್ಲಿ ಮಂಗಳವಾರ ರಾತ್ರಿ ನಡೆಯಿತು.

ಜಾಹೀರಾತು

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಅಧ್ಯಕ್ಷ ಸೈಯದುಲ್ ಉಲಮಾ ಸೈಯದ್ ಜಿಫ್ರಿ ಮುತ್ತುಕೋಯ ತಂಙಳ್ ಮಹಾಸಂಗಮವನ್ನು ಉದ್ಘಾಟಿಸಿದರು. ದ.ಕ.ಜಿಲ್ಲಾ ಖಾಝಿ ಶೈಖುನಾ ತ್ವಾಕಾ ಅಹ್ಮದ್ ಮುಸ್ಲಿಯಾರ್ ದುಆಃ ನೆರವೇರಿಸಿದರು.

ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಸೈಯದ್ ಬಾತಿಷ ತಂಙಳ್ ಆನೆಕಲ್ಲು ಅಧ್ಯಕ್ಷತೆ ವಹಿಸಿದ್ದರು. ಸಾಲೆತ್ತೂರು ಖತೀಬ್ ಮಜೀದ್ ದಾರಿಮಿ ಕುಂಬ್ರ ಪ್ರಸ್ತಾವಿಸಿ, ಸಮಸ್ತದ ನಡೆದು ದಾರಿಯ ಬಗ್ಗೆ ಮೆಲುಕುಹಾಕಿದರು.

ಜಾಹೀರಾತು

ಅಂತರಾಷ್ಟ್ರೀಯ ಪ್ರಭಾಷಣಗಾರ ಅಲ್ ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಪತ್ತನಾಪುರಂ ಅವರು ಮುಖ್ಯ ಪ್ರಭಾಷಣ ಮಾಡಿದರು. ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ ಸಮಸ್ತದ ಆದರ್ಶಗಳ ಬಗ್ಗೆ ಮಾತನಾಡಿದರು.

ವಾರ್ಷಿಕೋತ್ಸವಕ್ಕೆ ಚಾಲನೆ:

ಮಂಗಳವಾರ ಬೆಳಿಗ್ಗೆ ಸ್ವಾಗತ ಸಮಿತಿ ಚೇಯರ್ಮೆನ್ ಎಸ್.ಕೆ.ಉಮರ್ ಉಸ್ತಾದ್ ಕನ್ಯಾನ ಧ್ವಜಾರೋಹಣ ನೆರವೇರಿಸಿ, ವಾಷಿಕೋತ್ಸವಕ್ಕೆ ಚಾಲನೆ ನೀಡಿದರು. ಸಂಜೆ ಕೆ.ಎಸ್. ಅಲಿ ತಂಙಳ್ ಕುಂಬೋಲ್ ನೇತೃತ್ವದಲ್ಲಿ ಶಾಹುಲ್ ಹಮೀದ್ ವಲಿಯುಲ್ಲಾಹಿ (ರ.ಅ) ಝಿಯಾರತ್ ನಡೆಯಿತು. ಬಳಿಕ ಎಸ್ಕೆಐಎಂವಿ ಬೋರ್ಡ್‌ನ ಕಾರ್ಯದರ್ಶಿ ಶೈಖುನಾ ಎಂ.ಎ. ಖಾಸಿಂ ಉಸ್ತಾದ್ ನೇತೃತ್ವದಲ್ಲಿ ಮಜ್ಲಿಸ್‌ನ್ನೂರ್ ನಡೆಯಿತು. ಸಮಸ್ತ ಕರ್ನಾಟಕ ಮುಶಾವರ ಕಾರ್ಯದರ್ಶಿ ಶೈಖುನಾ ಬಿ.ಕೆ. ಅಬ್ದುಲ್ ಖಾದರ್ ಖಾಸಿಮಿ ಪ್ರವಚನ ಮಾಡಿದರು.

ಜಾಹೀರಾತು

ವೇದಿಕೆಯಲ್ಲಿ ಸೈಯದ್ ಹಾದಿ ತಂಙಳ್ ಮೊಗ್ರಾಲ್, ಸೈಯದ್ ಜಿಫ್ರಿ ತಂಙಳ್ ಆತೂರು, ಸೈಯದ್ ಅಮೀರ್ ತಂಙಳ್ ಕಿನ್ಯ, ಶೈಖುನಾ ಅಹ್ಮದ್ ಮುಸ್ಲಿಯಾರ್, ಖಾಸಿಂ ದಾರಿಮಿ ಕಿನ್ಯಾ, ಅಬ್ದುಲ್ ರಶೀದ್ ಹಾಜಿ, ಆಸೀಫ್ ಅಬ್ದುಲ್ಲ ಉಳ್ಳಾಲ, ಉಳ್ಳಾಲ ಎಸ್‌ಎಂಎ ಕಾಜೇಜಿನ ಪ್ರಾಂಶುಪಾಲ ಉಸ್ಮಾನ್ ಫೈಝಿ ತೋಡಾರು, ಹಾರೂನ್ ಅಹ್ಸನಿ, ಖಾಸಿಂ ದಾರಿಮಿ ಕಿನ್ಯ, ಹಮೀದ್ ಮುಸ್ಲಿಯಾರ್ ಕೊನಾಲೆ ಕನ್ಯಾನ, ಮಜೀದ್ ದಾರಿಮಿ, ಮಾಹಿನ್ ದಾರಿಮಿ ಪಾತೂರು, ಅಬ್ದುಲ್ ರಝಾಕ್ ಮಿಸ್ಬಾಹಿ, ಶರೀಫ್ ಫೈಝಿ ಕಡಬ, ಅಬ್ದುಲ್ ರಹ್ಮಾನ್ ತಬೂಕ್, ಮುಹಮ್ಮದ್ ಫೈಝಿ ಕಜೆ, ಅಬ್ದುಲ್ ರಹ್ಮಾನ್ ಹೈತಮಿ, ಶರೀಫ್ ಮುಸ್ಲಿಯಾರ್ ಕಜೆ, ಜಮಾಲುದ್ದೀನ್ ದಾರಿಮಿ ಗಡಿಯಾರ, ಇಸ್ಮಾಯಿಲ್ ಹಾಜಿ ಕಲ್ಕಾರ್, ಇಸ್ಮಾಯಿಲ್ ಹಾಜಿ ಬಾಳೆಕೋಡಿ, ಅಶ್ರಫ್ ಗೋಳಿಕಟ್ಟೆ, ರಶೀದ್ ಹಾಜಿ ಪರ್ಲಡ್ಕ, ಹನೀಫ್ ಹಾಜಿ ಬಂದರ್, ಉಸೈನ್ ದಾರಿಮಿ ರೆಂಜಿಲಾಡಿ, ಇಬ್ರಾಹಿಂ ಕಡವ, ಶರೀಫ್ ಕೆಳಿಂಜ, ಆರಿಫ್ ಕರಾಯಿ, ಎಂ.ಎಸ್. ಮುಹಮ್ಮದ್ ಉಪಸ್ಥಿತರಿದ್ದರು.

ಕೆ.ಎಂ.ನಝೀರ್ ದಾರಿಮಿ ಕನ್ಯಾನ ಕಿರಾಅತ್ ಪಠಿಸಿದರು. ಸ್ವಾಗತ ಸಮಿತಿಯ ಕನ್ವೀನರ್ ಕೆ.ಕೆ.ರಫೀಕ್ ಫೈಝಿ ಸ್ವಾಗತಿಸಿ, ಕಲಂದರ್ ಕುಕ್ಕಾಜೆ ವಂದಿಸಿ, ನಿಝಾಂ ಅನ್ಸಾರಿ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ