Categories: ಬಂಟ್ವಾಳ

ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ದೈವಾರಾಧನೆ ಕುರಿತು 24ರಂದು ಸಮಾವೇಶ

ಬಂಟ್ವಾಳ: ದೈವಾರಾಧನೆ ಕುರಿತು ನೀತಿಸಂಹಿತೆ ಕುರಿತಾಗಿ ಚರ್ಚಿಸಿ, ಸಮಾನ ನಿರ್ಧಾರವೊಂದಕ್ಕೆ ಬರಲು ಕಾಸರಗೋಡಿನಿಂದ ಕುಂದಾಪುರದವರೆಗಿನ ಗುತ್ತಿನವರಿಂದ ಹಿಡಿದು ಕಟ್ಟುವವರವರೆಗಿನ ಎಲ್ಲ ದೈವಾರಾಧಕ ಪ್ರಾತಿನಿಧಿಕವಾದ ಸಮಾಲೋಚನಾ ಸಮಾವೇಶ ಬಂಟ್ವಾಳ ತಾಲೂಕಿನ ಏರ್ಯಬೀಡಿನಲ್ಲಿ ಫೆ.24ರಂದು ನಡೆಯಲಿದೆ.

ಜಾಹೀರಾತು

ಈ ವಿಷಯವನ್ನು ಏರ್ಯಬೀಡಿನ ಯಜಮಾನ, ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವೇಣೂರು ಅರುವ ಅರಸ ಡಾ. ಪದ್ಮರಾಜ ಅಜಿಲ ಕಾರ್ಯಕ್ರಮ ಉದ್ಘಾಟಿಸುವರು. ಅಭ್ಯಾಗತರಾಗಿ ಮುಗುಳಿ ತಿರುಮಲೇಶ್ವರ ಭಟ್, ಪೀತಾಂಬರ ಹೇರಾಜೆ, ಪ್ರಕಾಶ್ ಕುಡ್ಕುಳಿ, ವಾಸುದೇವ ಸಾಲ್ಯಾನ್ ಭಾಗವಹಿಸುವರು. ಪ್ರೊ.ಬಿ.ಎ.ವಿವೇಕ ರೈ ದಿಕ್ಸೂಚಿ ಭಾಷಣ ಮಾಡುವರು. ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಸಮನ್ವಯಕಾರರಾಗಿ ಭಾಗವಹಿಸುವರು. ಬಳಿಕ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಸಮನ್ವಯಕಾರರಾಗಿ ವಿದ್ವಾಂಸ ಕೆ.ಎಲ್.ಕುಂಡಂತಾಯ ಪಾಲ್ಗೊಳ್ಳುವರು. ಜಗನ್ನಾಥ, ದಯಾನಂದ ಕತ್ತಲಸಾರ್, ನೋಣಯ ಬಂಗೇರ ಅಭ್ಯಾಗತರಾಗಿ ಪಾಲ್ಗೊಳ್ಳುವರು. ಸಮಾರೋಪದಲ್ಲಿ ಜಾನಪದ ತಜ್ಞ ಡಾ. ವೈ.ಎನ್.ಶೆಟ್ಟಿ ಮಾತನಾಡುವರು ಎಂದು ಡಾ. ಆಳ್ವ ತಿಳಿಸಿದರು. ದೈವಾರಾಧನೆ ಶ್ರದ್ಧಾಭಕ್ತಿಯ ಆರಾಧನೆಯಾಗಿದ್ದು, ಇತ್ತೀಚಿಗೆ ಪರಂಪರೆಯ ರೀತಿನೀತಿಗಳನ್ನು ಬಿಟ್ಟು, ಅತಿರೇಕಗಳು ನಡೆಯುತ್ತಿರುವುದು ವಿಷಾದನೀಯ. ಹೀಗಾಗಿ ಕೆಲವು ನಿಯಮಗಳನ್ನು ಪಾಲಿಸುವ ಅಗತ್ಯವಿದೆ ಎಂದು ಡಾ. ಏರ್ಯ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಉದ್ಯಮಿ ಚಂದ್ರಹಾಸ ಶೆಟ್ಟಿ ರಂಗೋಲಿ ಮತ್ತು ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts