Categories: ಬಂಟ್ವಾಳ

ಬಿ.ಆರ್.ಎಂ.ಪಿ. ಶಾಲೆಗೆ ಹಳದಿ ಶಾಲೆ ಪ್ರಶಸ್ತಿ

ಬಂಟ್ವಾಳ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ರಾಜ್ಯ ವಿಜ್ಞಾನ ಪರಿಷತ್ತು ದಕ್ಷಿಣ ಕನ್ನಡ ಸಹಯೋಗದೊಂದಿಗೆ ನಡೆಸಿದ ಪರಿಸರ ಸ್ನೇಹಿ ಶಾಲಾ ಅಭಿಯಾನದಲ್ಲಿ ವಿದ್ಯಾಗಿರಿಯ ಬಿ.ಆರ್.ಎಂ.ಪಿ.ಶಾಲೆಯು ಹಳದಿ ಶಾಲೆ ಪ್ರಶಸ್ತಿಗೆ ಭಾಜನವಾಯಿತು.

ಜಾಹೀರಾತು

ಪ್ರಶಸ್ತಿಯು ನಗದು, ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಒಳಗೊಂಡಿದೆ. ಶಾಲಾ ವಾತಾವರಣವು ಪರಿಸರಕ್ಕೆ ಪೂರಕವಾಗಿದ್ದು, ತ್ಯಾಜ್ಯ ನಿರ್ವಹಣೆ, ಉಪಯೋಗಿಸಿದ ನೀರಿನ ಪುನರ್ಬಳಕೆ, ವಿದ್ಯಾರ್ಥಿ ಅರಿವು ಮತ್ತು ಜಾಗೃತಿ,ಔಷಯ ಸಸ್ಯಗಳ ಬೆಳೆ ಇತ್ತಾದಿ ಹಂತಗಳಲ್ಲಿ ಇಲಾಖೆಯು ಸಮೀಕ್ಷೆ ನಡೆಸಿದ್ದು, ಗುಣಮಟ್ಟವನ್ನು ಆಧರಿಸಿ ಈ ಶಾಲೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಫೆ.21ರಂದು ನಡೆದ ಜಿಲ್ಲಾ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿತು. ಶಿಕ್ಷಕಿ ಕೇಶವತಿ ಅವರ ಮುಂದಾಳತ್ವದಲ್ಲಿ ವಿದ್ಯಾರ್ಥಿಗಳು ಹಳದಿ ಶಾಲೆ ಪ್ರಶಸ್ತಿಯನ್ನು ಸ್ವೀಕರಿಸಿದ್ದು, ಶಾಲಾ ಪ್ರಾಂಶುಪಾಲೆ ರಮಾಶಂಕರ್ ಶಿಕ್ಷಕ ವೃಂದದವರನ್ನು ಹಾಗೂ ವಿದ್ಯಾಥಿಗಳನ್ನು ಶ್ಲಾಘಿಸಿದ್ದಾರೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್ ಪ್ರಶಸ್ತಿ ನೀಡಿ ಗೌರವಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts