ಸರಕಾರಿ ಶಾಲೆ ಉಳಿಸಿ ತಂಡದಿಂದ ಚಿಕ್ಕಬಳ್ಳಾಪುರ ಭೇಟಿ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಪ್ರಕಾಶ್ ಅಂಚನ್ ನೇತೃತ್ವದ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಯ ತಂಡ ಸರಕಾರಿ ಶಾಲೆಯಲ್ಲಿ  ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ  ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು  ಗೌರಿಬದನೂರಿನಲ್ಲಿ ಗ್ರಾಮವಾಸ್ತವ್ಯ ಹೂಡಿದೆ. ಗುರುವಾರ ಮುಂಜಾನೆ ಬಂಟ್ವಾಳದಿಂದ ಹೊರಟಿರುವ ತಂಡ ಗೌರಿಬಿದನೂರಿನ ನೇತಾಜಿ ಫೌಂಡೇಶನ್ ಸದಸ್ಯರ  ಜೊತೆಗೂಡಿ ಸಂಜೆಯ ವೇಳೆ ವಿದ್ಯುತ್ ಕಾಲೋನಿಯ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂದರ್ಶಿಸಿದೆ. ಬಳಿಕ ಜರಬಂಡಹಳ್ಳಿ ಗ್ರಾಮದಲ್ಲಿ ಮನೆ ಭೇಟಿ ಮಾಡಿ ಶಾಲೆ ಉಳಿಸುವ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದೆ. ಸ್ಥಳೀಯ ಗ್ರಾಮಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸದಸ್ಯು ಹಾಗೂ ಸ್ಥಳೀಯ ಯುವಕ ಸಂಘದ ಜೊತೆ ಈ ಬಗ್ಗೆ ಮಾತುಕತೆ ನಡೆಸಿತು. ಈ ಸಂದರ್ಭ ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್, ಸದಸ್ಯರಾದ ಪುರುಷೋತ್ತಮ ಅಂಚನ್, ರಾಮಚಂದ್ರ ಪೂಜಾರಿ, ನವೀನ್ ಸೇಸಗುರಿ, ದೀಪಕ್ ಸಾಲ್ಯಾನ್, ಅಶೋಕ್ ಗೌರಿಬಿದನೂರು ಹಾಜರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ