Categories: ಯಕ್ಷಗಾನ

ಯಕ್ಷಸಿಂಧೂರ ಪ್ರಶಸ್ತಿ ಪ್ರದಾನ

ವಿಟ್ಲ ಯಕ್ಷ ಸಿಂಧೂರ ಪ್ರತಿಷ್ಠಾನದ ವತಿಯಿಂದ ವಿಟ್ಲ ಶ್ರೀ ಭಗವತೀ ದೇವಸ್ಥಾನದ ಜಾತ್ರೆ ಮಹೋತ್ಸವ ಸಂದರ್ಭ ಬಾಲಕಲಾವಿದರ ಬಯಲಾಟ, ಹಿರಿಯ ಕಲಾವಿದರಿಗೆ ಸಮ್ಮಾನ ಮತ್ತು ಪ್ರಸಿದ್ಧ ಕಲಾವಿದರ ಬಯಲಾಟ ನಡೆಯಿತು.

ಜಾಹೀರಾತು

ಶ್ರೀ ಕಟೀಲು ಮೇಳದ ನಿವೃತ್ತ ಹಿಮ್ಮೇಳ ವಾದಕ ಪೆರುವಾಯಿ ನಾರಾಯಣ ಭಟ್ ಅವರಿಗೆ ಯಕ್ಷಸಿಂಧೂರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಳ್ಯ ಪ್ರತಿಭಾ ವಿದ್ಯಾಲಯದ ಪ್ರಾಚಾರ್ಯ ವೆಂಕಟರಾಮ ಭಟ್ ಸುಳ್ಯ ಅಭಿನಂದನ ಭಾಷಣ ಮಾಡಿದರು.

ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ಕೆ.ಮೋಹನ ರಾವ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಡಾ.ಚರಣ್ ಕಜೆ ಭಾಗವಹಿಸಿದ್ದರು. ಇದೇ ಸಂದರ್ಭ ಕಸಾಪ ವತಿಯಿಂದ ಯಕ್ಷಗುರು ಕರ್ಗಲ್ಲು ವಿಶ್ವೇಶ್ವರ ಭಟ್ ಅವರನ್ನು ಸಮ್ಮಾನಿಸಲಾಯಿತು. ಕಲಾವಿದ, ಉಪನ್ಯಾಸಕ ರಾಧಾಕೃಷ್ಣ ಕಲ್ಚಾರ್ ಅಭಿನಂದನ ಭಾಷಣ ಮಾಡಿದರು.

ಯಕ್ಷ ಸಿಂಧೂರ ಪ್ರತಿಷ್ಠಾನದ ಸಂಚಾಲಕ ಚಣಿಲ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಶ್ರೀಧರ ವನಭೋಜನ ನಿರೂಪಿಸಿದರು. ಹಿಮ್ಮೇಳ ನಾದನಿನಾದ ಕಾರ್ಯಕ್ರಮ, ಕರ್ಗಲ್ಲು ವಿಶ್ವೇಶ್ವರ ಭಟ್ ನಿರ್ದೇಶನದಲ್ಲಿ ಬಾಲಕಲಾವಿದರಿಂದ ಪ್ರಮೀಳಾ ಸಂಧಾನ ವೀರ ವೈಷ್ಣವ ಯಕ್ಷಗಾನ ಬಯಲಾಟ ಮತ್ತು ಪ್ರಸಿದ್ಧ ಕಲಾವಿದರಿಂದ ಸತ್ವ ಪರೀಕ್ಷೆ ಎಂಬ ಯಕ್ಷಗಾನ ಬಯಲಾಟ ಜರುಗಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ