Categories: ಬಂಟ್ವಾಳ

ಬಂಟ್ವಾಳದಲ್ಲಿ ವಿಶೇಷಚೇತನ ಮಕ್ಕಳ ಸಮಾವೇಶ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಅವಕಾಶಗಳು ದೊರೆತರೆ, ವಿಶೇಷಚೇತನ ಮಕ್ಕಳೂ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಆತ್ಮವಿಶ್ವಾಸದಿಂದ ಬದುಕುತ್ತಾರೆ. ಸಾಮಾಜಿಕವಾಗಿ ಅವರಿಗೆ ಅನುಕಂಪದ ಜೊತೆಗೆ ಪ್ರೋತ್ಸಾಹವೂ ಒದಗಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಕೊಟ್ಟರೆ ಅವಕಾಶ, ಮುಟ್ಟುವೆವು ಆಕಾಶ ಎಂಬ ಘೋಷವಾಕ್ಯದೊಂದಿಗೆ ಬಂಟ್ವಾಳದಲ್ಲಿ ಫೆ.23ರಂದು ನಡೆದ ವಿಶೇಷ ಚೇತನ ಮಕ್ಕಳ ಹಬ್ಬದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಈ ಸಂದರ್ಭ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಸನ್ಮಾನಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ವಿಕಲಚೇತನ ಮಕ್ಕಳು ಸಮಾಜದ ಕಣ್ಗಾವಲಿನಲ್ಲಿ ಬೆಳೆಯಬೇಕು. ಅವರ ಪೋಷಕರಿಗೆ ಸಮಾಜದ ಬೆಂಬಲ ಬೇಕಾಗಿದೆ ಎಂದು ಹೇಳಿದರು.

ವಿಶೇಷ ಚೇತನ ಮಕ್ಕಳಾದ ಎಸ್.ವಿ.ಎಸ್.ಟೆಂಪಲ್ ಸ್ಕೂಲ್ ನ ಕೌಶಿಕ್ ಕಾಲಿನಲ್ಲಿ ಬರೆದ ಚಿತ್ರಗಳ ಪುಸ್ತಕ ಹಾಗೂ ಎಸ್.ವಿ.ಎಸ್.ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಭಾಗ್ಯಶ್ರೀ ಬರೆದ ಭಾಗ್ಯದೀಪಿಕೆ ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ಇದೇ ವೇಳೆ ವಿಶೇಷಚೇತನ ಸಾಧಕರಾದ ಯಶಸ್ವಿ, ಚಂದ್ರಿಕಾ, ಶ್ರೀಕೃಷ್ಣ, ಮಹಮ್ಮದ್ ಜುನೈದ್ ಮತ್ತು ಬೀಪಾತುಮ್ಮಾ ಅವರನ್ನು ಸನ್ಮಾನಿಸಲಾಯಿತು. ವಿಶೇಷಚೇತನರಾಗಿ ಸರಕಾರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ದೀಪಾ ಅನಿಸಿಕೆ ವ್ಯಕ್ತಪಡಿಸಿದರು. ತಾಲೂಕಿನಲ್ಲಿ ಸರಕಾರದಿಂದ ಗುರುತಿಸಲ್ಪಟ್ಟ ಸುಮಾರು 500 ಮಂದಿ ವಿಕಲಚೇತನ ಮಕ್ಕಳು ಪೋಷಕರೊಂದಿಗೆ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿಜೇತಳಾದ ಚೆಸ್ ಪ್ರತಿಭೆ ಕಡೇಶ್ವಾಲ್ಯ ಶಾಲೆ ವಿದ್ಯಾರ್ಥಿನಿ ಯಶಸ್ವಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್.ಮಹಮ್ಮದ್, ತುಂಗಪ್ಪ ಬಂಗೇರ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ತಾಪಂ ಸದಸ್ಯರಾದ ಸಂಜೀವ ಪೂಜಾರಿ, ಪ್ರಭಾಕರ ಪ್ರಭು, ಶಾರದಾ ಹೈಸ್ಕೂಲು ಸಂಚಾಲಕ ಮೊಗರ್ನಾಡು ಜನಾರ್ದನ ಭಟ್, ಚುಟುಕು ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಇರಾ ನೇಮು ಪೂಜಾರಿ, ಡಯಟ್ ಪ್ರಾಂಶುಪಾಲ ಸಿಪ್ರಿಯಾನ್ ಮೊಂತೆರೊ, ಶಿಕ್ಷಕರ ಸಂಘಟನೆಗಳ ಪ್ರಮುಖರಾದ ರಮಾನಂದ ನೂಜಿಪ್ಪಾಡಿ, ಮಹಮ್ಮದ್ ತುಂಬೆ, ರಮೇಶ್ ನಾಯಕ್ ರಾಯಿ, ಮಹೇಶ್ ಕುಮಾರ್ ಕರ್ಕೇರ, ಪುರಸಭೆ ಮುಖ್ಯಾಧಿಕಾರಿ ರೇಖಾ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್. ಶಿಕ್ಷಣ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ನಾರಾಯಣ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್, ಬಿಆರ್ ಸಿಯ ನೋಡಲ್ ಅಧಿಕಾರಿ ಸುರೇಖಾ ಯಳವರ ಉಪಸ್ಥಿತರಿದ್ದರು. ಶಿಕ್ಷಕ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

7 hours ago