Categories: ಬಂಟ್ವಾಳ

ಕೃಷ್ಣಕುಮಾರ್ ಪೂಂಜ ಅವರಿಗೆ ಸನ್ಮಾನ

ನೊಂದವರ , ದುರ್ಬಲ ವರ್ಗಗಳ ಸೇವೆ ದೇವರ ಸೇವೆ. ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಆರೋಗ್ಯ, ಶಿಕ್ಷಣ ಮತ್ತು ,ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ  ಆದ್ಯತೆ ನೀಡುವ  ಕೆಲಸವನ್ನು ಮಾಡಲಾಗುತ್ತಿದೆ .ಈ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಸೇವಾರತ್ನ ಕೃಷ್ಣ ಕುಮಾರ್ ಪೂಂಜ  ಹೇಳಿದರು.

ಜಾಹೀರಾತು

ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ  ಸನ್ಮಾನ ಸ್ವೀಕರಿಸಿ ಮಾತನಾಡಿದರು.  ಸಮಾರಂಭದ ಮುಖ್ಯ ಅತಿಥಿ  ರೋಟರಿ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್ ಪರಂಗಿಪೇಟೆಯಲ್ಲಿ ಟೌನ್ ರೋಟರಿ ವತಿಯಿಂದ ನೂತನ ಕ್ಲಬ್ ಆರಂಭಿಸುವ ಬಗ್ಗೆ ಮಾಹಿತಿ ನೀಡಿದರು. ಸೇವಾಂಜಲಿ ಪ್ರತಿಷ್ಠಾನದ ಸೇವಾ ಕಾರ್ಯಕ್ರಮಗಳಿಗೆ ರೋಟರಿಯಂತಹ ಸಂಸ್ಥೆಗಳ ಸಹಕಾರ ಅಗತ್ಯ ಇದೆ ಎಂದು ಮನವಿ ಮಾಡಿದರು. ವೇದಿಕೆಯ ಮೇಲೆ ರೋಟರಿ ವಲಯ ಕಾರ್ಯದರ್ಶಿ ನಾರಾಯಣ ಹೆಗ್ಡೆ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷರಾದ ಉಮೇಶ್ ನಿರ್ಮಲ್, ಕಾರ್ಯದರ್ಶಿ ಜಯರಾಜ್ ಬಂಗೇರ, ಪದಾಧಿಕಾರಿಗಳಾದ ಶಂಕರ್  ಶೆಟ್ಟಿ, ಪ್ರಕಾಶ್ ಆಳ್ವಾ, ಯಶವಂತ ವಿಟ್ಲ, ರಾಜ್ ಕುಮಾರ್ ಉಪಸ್ತಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ