ಭಾರತ ಚುನಾವಣಾ ಆಯೋಗ, ಬಂಟ್ವಾಳ ಪುರಸಭೆ, ದ.ಕ.ಜಿಲ್ಲಾ ಸ್ವೀಪ್ ಸಮಿತಿ, ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಪದವಿಪೂರ್ವ ಕಾಲೇಜು ಸಹಭಾಗಿತ್ವದಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸುವ ಜಾಥಾ ಬುಧವಾರ ಬಿ.ಸಿ.ರೋಡ್ ಪೊಳಲಿ ದ್ವಾರದ ಬಳಿಯಿಂದ ಬಸ್ ನಿಲ್ದಾಣದವರೆಗೆ ನಡೆಯಿತು.
ಈ ಸಂದರ್ಭ ಪುರಸಭೆಯ ಅಧಿಕಾರಿಗಳು, ಕಾಲೇಜಿನ ಶಿಕ್ಷಕ, ವಿದ್ಯಾರ್ಥಿ ವರ್ಗ ಸಹಿತ ಹಲವರು ಪಾಲ್ಗೊಂಡು ಮತದಾನದ ಮಹತ್ವ ಸಾರುವ ಜಾಗೃತಿಯ ಪ್ರತಿಜ್ಞೆಯನ್ನು ಕೈಗೊಂಡರು.
ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ