Categories: ಬಂಟ್ವಾಳ

ಲೊರೆಟ್ಟೊಪದವಿನಲ್ಲಿ ಕೃಷಿ ಬಿಕ್ಕಟ್ಟು ವಿಚಾರಸಂಕಿರಣ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಬಂಟ್ವಾಳ ತಾಲೂಕು ಘಟಕದ ಆಶ್ರಯ ದಲ್ಲಿ ಪ್ರಸ್ತುತ ಕೃಷಿ ಬಿಕ್ಕಟ್ಟು ಹಾಗೂ ಸವಾಲುಗಳ ಕುರಿತು ವಿಚಾರ ಸಂಕೀರ್ಣ ಮತ್ತು ಲೊರೆಟ್ಟೊ ಪದವು ವಲಯ ಘಟಕದ ಸಮಿತಿ ರಚನಾ ಸಭೆ ಮಾ.೩ ರಂದು ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿದೆ ಎಂದು ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ತಿಳಿಸಿದರು

ಜಾಹೀರಾತು

ಬಿ.ಸಿ.ರೋಡಿನಲ್ಲಿ ಸುದ್ದಿ ಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಕೃಷಿ ಆಧಾರಿತವಾದ ನಮ್ಮ ದೇಶವು ಕಳೆದ ೨ ದಶಕಗಳಿಂದ ಕೃಷಿ ಉತ್ಪನ್ನ ಅಸ್ಥಿರ ಮಾರುಕಟ್ಟೆ ಧಾರಣೆ ಅಧಿಕವಾದ ಉತ್ಪಾದನಾ ವೆಚ್ಚ,  ಪ್ರಾಕೃತಿಕ ವಿಕೋಪ, ಅತಿವೃಷ್ಟಿ ಹಾಗೂ ಬರದಿಂದ ರೈತರು ಬಸವಳಿದರೂ ಸರಕಾರಗಳ ತಪ್ಪು ನೀತಿ ಗಳಿಂದಾಗಿ ಅನುತ್ಪಾದಕ ಕ್ಷೇತ್ರವಾಗಿ ಪರಿವರ್ತನೆ ಯಾಗುತ್ತಿದೆ. ಯುವ ಸಮುದಾಯ ನಗರ ಪ್ರದೇಶದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದರೆ ಗ್ರಾಮೀಣ ಕೃಷಿ ಕ್ಷೇತ್ರದಲ್ಲಿ ವೃದ್ದರನ್ನು ಏಕಾಂಗಿಯಾಗಿಸುತ್ತಿದೆ ಈ ನಿಟ್ಟಿನಲ್ಲಿ ಈ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ ಉದ್ಘಾಟಿಸಲಿದ್ದಾರೆ, ತಾಲೂಕು ಸಮಿತಿ ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.ಅತಿಥಿಗಳಾಗಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಭಟ್ ಕೊಜಂಬೆ, ಲೊರೆಟ್ಟೊ ಮಾತಾ ಚರ್ಚಿನ ಉಪಾಧ್ಯಕ್ಷ ರಿಚರ್ಡ್ ಮಿನೇಜಸ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಸುದ್ದಿಗೊಷ್ಟಿಯಲ್ಲಿ ತಾಲೂಕು ಸಮಿತಿ ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಬಾಳ್ತಿಲ, ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡೀಸ್, ವಿನಯ್ ರೂಪಸ್ ಪಿಂಟೋ ಹಾಜರಿದ್ದರು

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.