ಮಾವಿನಕಟ್ಟೆಯಲ್ಲಿ ಬಿಜೆಪಿಯಿಂದ ಕಮಲಜ್ಯೋತಿ ಅಭಿಯಾನ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿಯ ಚೆನ್ನೈತ್ತೋಡಿ ಪಂಚಾಯತ್ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ಕಮಲ ಜ್ಯೋತಿ ಅಭಿಯಾನ ನಡೆಯಿತು.ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಈ ಸಂದರ್ಭ ಮಾತನಾಡಿ,  ಸರ್ವರಿಗೆ ಸಮಪಾಲು ಸರ್ವರಿಗೆ  ಸಮ ಬಾಳು ಕಲ್ಪನೆಯ ಕೇಂದ್ರ ಸರ್ಕಾರದ ಸಂಕಲ್ಪವನ್ನು ಜಾರಿಗೊಳಿಸುವ ವಿಚಾರ ಹಾಗೂ ಕೇಂದ್ರ ಹಮ್ಮಿಕೊಂಡ ವಿವಿಧ ಕಾರ್ಯಯೋಜನೆಗಳನ್ನು ಜನರಿಗೆ ತಿಳಿಸುವ ಕಾರ್ಯವಾಗಬೇಕು ಎಂದರು. ನರೇಂದ್ರ  ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಅಧಿಕಾರ ಅವಧಿಯಲ್ಲಿ ಸುಮಾರು ೧೫೩ ವಿವಿಧ ಜನಪರ ಯೋಜನೆಗಳು ಮತ್ತು ಐತಿಹಾಸಿಕ ತಿರ್ಮಾನಗಳನ್ನು ಸಕಾರಗೊಳಿಸಿ ಭವಿಷ್ಯದಲ್ಲಿ ಪ್ರತಿಯೊಬ್ಬ ಪ್ರಜೆಯು ತನ್ನ ಬದುಕಿನಲ್ಲಿ ನಿಟ್ಟುಸಿರು ಬಿಟ್ಟು ಜೀವನ ಸಾಗಿಸುವಂತೆ ಮಾಡಿದೆ ಎಂದರು.

ಜಾಹೀರಾತು

 

ನಂತರ  ಮೋದಿ ಅಭಿಮಾನಿ ಬಳಗದಿಂದ ಯಕ್ಷಗಾನ ನಡಿಯಿತು. ಮೋದಿ ಟೀ ಸ್ಟಾಲ್ ಅನ್ನು ಶಾಸಕರಾದ ರಾಜೇಶ್ ನಾಯ್ಕ್, ಹಾಗೂ ಕ್ಷೇತ್ರದ ಅಧ್ಯಕ್ಷರಾದ ದೇವದಾಸ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾರ ತುಂಗಪ್ಪ ಬಂಗೇರ ಉದ್ಘಾಟಿಸಿದರು. ಚಿದಾನಂದ ಮೋದಿ ಚಿತ್ರ ಬಿಡಿಸಿದರು. ರಾಜ್ಯ ಸಹವಕ್ತಾರೆಯಾದ ಸುಲೋಚನಾ ಜಿ.ಕೆ ಭಟ್ ಸ್ವಾಗತಿಸಿ ವಂದಿಸಿದರು,  ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳ, ತಾಲೂಕು ಪಂ ಸದಸ್ಯರಾದ ಪ್ರಭಾಕರ್ ಪ್ರಭು, ರಮೇಶ್ ಕುಡ್ಮೇರು, ಸಂಗಬೆಟ್ಟು ಶಕ್ತಿಕೇಂದ್ರ ಅಧ್ಯಕ್ಷರಾದ ರತ್ನಕುಮಾರ್ ಚೌಟ, ಕ್ಷೇತ್ರದ ಉಪಾಧ್ಯಕ್ಷರಾದ ವಿಜಯ ರೈ, ಹಾಗೂ ಕೃಷ್ಣ ಅಲಿಯಾಸ್ ಮೋದಿ ಭಟ್ ಉಡುಪಿ, ಮಂಡಲದ ಪ್ರ.ಕಾರ್ಯದರ್ಶಿಯಾದ ಚಂದ್ರಶೇಖರ ಶೆಟ್ಟಿ, ಪ್ರಮುಖರಾದ ಶೇಖರ್ ಮತ್ತು ಜಗದೀಶ ಶೆಟ್ಟಿ ಉಪಸ್ಥಿತರಿದ್ದರು.

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಾವಿನಕಟ್ಟೆಯಲ್ಲಿ ಬಿಜೆಪಿಯಿಂದ ಕಮಲಜ್ಯೋತಿ ಅಭಿಯಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*