Categories: ವಿಟ್ಲ

ಉಕ್ಕುಡ ಮದ್ರಸ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ವಿಟ್ಲ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಪಾಡಂತರ ಮರ್ಕಝ್ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಅಂತಾರಾಜ್ಯ ಮುಹ್ಯಿಸ್ಸುನ್ನ ಸ್ಟೂಡೆಂಟ್ಸ್ ಫೆಸ್ಟ್ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿಟ್ಲ ಸಮೀಪದ ಉಕ್ಕುಡ ದರ್ಸ್ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಬಾಚಿಕೊಳ್ಳುವ ಮೂಲಕ ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ.

ಜಾಹೀರಾತು


ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಎಂಬ ವಿದ್ವಾಂಸ ಒಕ್ಕೂಟದ ಕಾರ್ಯದರ್ಶಿ ಹಾಗೂ ಕೇರಳ ಮುಸ್ಲಿಂ ಜಮಾಅತ್ ರಾಜ್ಯ ಉಪಾಧ್ಯಕ್ಷರಾದ ಪೊನ್ಮಳ ಅಬ್ದುಲ್ ಖಾದಿರ್ ಮುಸ್ಲಿಯಾರ್ ಇವರ ಶಿಷ್ಯಂದಿರ ನೇತೃತ್ವದಲ್ಲಿ ಭಾರತದಾದ್ಯಂತವಿರುವ ಮುಹ್ಯಿಸ್ಸುನ್ನ ದರ್ಸ್‌ಗಳ ಸುಮಾರು ಎರಡು ಸಾವಿರದಷ್ಟು ಪ್ರತಿಭೆಗಳು ಸ್ಟೂಡೆಂಟ್ಸ್ ಫೆಸ್ಟಿನಲ್ಲಿ ಭಾಗವಹಿಸಿದ್ದರು. ಸಬ್ ಜೂನಿಯರ್ ವಿಭಾಗದ ಕಿತಾಬ್ ಟೆಸ್ಟ್ ಸ್ಪರ್ಧೆಯಲ್ಲಿ ಉಕ್ಕುಡ ದರ್ಸ್ ವಿದ್ಯಾರ್ಥಿಗಳಾದ ಮುಹಮ್ಮದ್ ಪಕ್ಷಿಕೆರೆ ಪ್ರಥಮ ಹಾಗೂ ಯಾಸಿರ್ ಉಕ್ಕುಡ ತೃತೀಯ ಸ್ಥಾನ ಪಡೆದಿದ್ದಾರೆ. ಬೈತ್ ಸ್ಪರ್ಧೆಯಲ್ಲಿ ಮುಹಮ್ಮದ್ ಕೈಸ್ ಉಳ್ಳಾಲ ಟಾಪ್ ಟೆನ್ ಆಗಿ ಆಯ್ಕೆಯಾದರು. ಸ್ಪರ್ಧೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಉಕ್ಕುಡ ಬದ್ರಿಯಾ ಜುಮಾ ಮಸ್ಜಿದ್, ಮುರ್ಶಿದುಲ್ ಅನಾಂ ಸ್ವಲಾತ್ ಕಮಿಟಿ ಹಾಗೂ ಜಲಾಲಿಯ್ಯ ಕಮಿಟಿಗಳ ವತಿಯಿಂದ ಮಸ್ಜಿದ್ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ