Categories: ಬಂಟ್ವಾಳ

ಸರಕಾರಿ ಶಾಲೆ ಉಳಿಸಲು ಬಲೇ ಚಾ ಪರ್ಕ

ಬಂಟ್ವಾಳ: ಶತಮಾನದತ್ತ ಸಾಗುತ್ತಿರುವ ಇಲ್ಲಿನ ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮತ್ತಷ್ಟು ಸಶಕ್ತಗೊಳಿಸಿ ವಿದ್ಯಾಥಿಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಮ್ಮ ಊರು ನಮ್ಮ ಶಾಲೆ, ಶಾಲೆಯತ್ತ ನಮ್ಮ ಚಿತ್ತ, ನಮ್ಮ ಹೆಜ್ಜೆ ಎನ್ನುವ ಧ್ಯೇಯ ವಾಕ್ಯದಡಿ ಬಲೇ ಚಾಪರ್‍ಕ ಎನ್ನುವ ವಿನೂತನ ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಲಾಗಿತ್ತು.

ಜಾಹೀರಾತು

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ವಿಶೇಷ ಅತಿಥಿಯಾಗಿ ಚಿತ್ರನಟ ದೇವದಾಸ್ ಕಾಪಿಕಾಡ್ ಅವರು ಭಾಗವಹಿಸಿ ಕನ್ನಡ ಭಾಷೆಯ ಜೊತೆಗೆ ವ್ಯಾವಹಾರಿಕವಾಗಿ ಪ್ರಗತಿ ಹೊಂದಲು ಇಂದಿನ ದಿನಗಳಲ್ಲಿ ಇಂಗ್ಲೀಷ್ ಅಗತ್ಯವಿದೆ ಎಂದ ಅವರು ಶಾಲೆಯ ಅಭಿವೃದ್ದಿಗಾಗಿ ತಾನು ಸಹಕರಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶಿವಪ್ರಕಾಶ್ ಮಾತನಾಡಿ ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ವಿನೂತನವಾದ ಪ್ರಯೋಗಗಳು ನಮ್ಮ ಶಾಲೆಯಲ್ಲಿ ಆಗುತ್ತಿದೆ. ಅನೇಕ ಪೋಷಕರು ಖಾಸಗಿ ಶಾಲೆಯಲ್ಲಿ ಓದುತ್ತಿರುವ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ ಶಾಲೆಯನ್ನು ಬಲಪಡಿಸುತ್ತಿದ್ದಾರೆ ಇಂತಹ ಕಾರ್ಯಗಳು ನಮಗೆಲ್ಲರಿಗೂ ಮಾದರಿ ಎಂದರು. ವಿದ್ಯಾರ್ಥಿಗಳ ಪೋಷಕರು ಸರಕಾರಿ ಶಾಲೆ ಹಾಗೂ ಖಾಸಗಿ ಶಾಲೆಯನ್ನು ಪರಸ್ಪರ ತುಲನೆ ಮಾಡಿ ನೋಡಬೇಕು, ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಓದಿಸಿದರೆ ವರ್ಷಕ್ಕೆ ಕನಿಷ್ಟ ೩ ಲಕ್ಷ ರುಪಾಯಿಯನ್ನು ಉಳಿಸಲು ಸಾಧ್ಯವಿದೆ ಎಂದು ಅವರು ವಿಟ್ಲ ಹಾಗೂ ದಡ್ಡಲಕಾಡು ಶಾಲೆಯಲ್ಲಿ ಗ್ರಾಮಸ್ಥರ ಸಹಕಾರದಿಂದಲೇ ಇಂದು ಸೆಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು. ಶಾಲಾಭಿವೃದ್ದಿ ಸಮಿತಿಯ ಗೌರವಾಧ್ಯಕ್ಷ ಡಾ. ರಮೇಶಾನಂದ ಸೋಮಾಯಾಜಿ ಅಧ್ಯಕ್ಷತೆ ವಹಿಸಿದ್ದರು.

ಪುರಸಭಾ ಸದಸ್ಯೆ ವಿದ್ಯಾವತಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್, ಮುಖ್ಯೋಪಧ್ಯಾಯಿನಿ ಕುಶಲ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಶುಭ, ಸುರೇಖ, ಪ್ರಮುಖರಾದ ಬೇಬಿ ಕುಂದರ್, ಸತೀಶ್ ಕುಲಾಲ್, ಡಿ.ಎಂ.ಕುಲಾಲ್, ರಮೇಶ್ ನಾಯಕ್ ರಾಯಿ, ಉಮನಾಥ ರೈ ಮೇರಾವು, ಶಿವಪ್ರಸಾದ್ ಶೆಟ್ಟಿ, ಬಿ.ಎಂ. ತುಂಬೆ, ರಾಜೇಶ್ ಸುವರ್ಣ, ಭಾಸ್ಕರ ರಾವ್, ಲಿಂಗಪ್ಪ ಮಾಸ್ತರ್, ದಯನಂದ ರೈ, ರಮೆಶ್ ಶೆಣೈ, ಹೆಚ್.ಎನ್.ಹೆಬ್ಬಾರ್, ಚೆನ್ನಕೇಶವ ಮತ್ತಿತರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಬಿ.ಶ್ರೀಧರ ಅಮೀನ್ ಅಗ್ರಬೈಲು ಸ್ವಾಗತಿಸಿದರು, ಹಳೆ ವಿದ್ಯಾರ್ಥಿ ಸಂಘದ ಸಲಹೆಗಾರ ಬಿ.ರಾಮಚಂದ್ರ ರಾವ್ ಪ್ರಸ್ತಾವಿಸಿದರು, ಶಾಲಾ ಶಿಕ್ಷಕ ನವೀನ್ ಪಿ.ಎಸ್. ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.