Categories: ಬಂಟ್ವಾಳ

ಪೊಳಲಿಗೆ ಭಕ್ತರ ಸಂಖ್ಯೆ ವೃದ್ಧಿ, ಐದು ದಿನಗಳಲ್ಲಿ 2 ಲಕ್ಷ ಜನರಿಂದ ಅನ್ನಪ್ರಸಾದ ಸ್ವೀಕಾರ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಆರಂಭಗೊಂಡಿರುವ ಬ್ರಹ್ಮಕಲಶ ಉತ್ಸವಗಳ ಕಾರ್ಯಕ್ರಮಕ್ಕೆ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ವೃದ್ಧಿಸುತ್ತಿದ್ದು, ಶುಕ್ರವಾರ ಸುಮಾರು 50 ಸಾವಿರ ಮಂದಿ ಅನ್ನಪ್ರಸಾದ ಸ್ವೀಕರಿಸಿದರು.

ಮಾ.4ರಿಂದ ಶುಕ್ರವಾರದವರೆಗೆ 1.5 ಲಕ್ಷ ಭಕ್ತರು ಅನ್ನಪ್ರಸಾದ ಸ್ವೀಕರಿಸಿದ್ದು, ಬಹುತೇಕ ಅಷ್ಟೇ ಮಂದಿ ಉಪಾಹಾರ ಸ್ವೀಕರಿಸಿದ್ದಾರೆ.

ಭಾನುವಾರ ಮತ್ತು 13ರಂದು ವಿಶೇಷವಾದ ಕಾರ್ಯಕ್ರಮಗಳು ಇರುವ ಕಾರಣ ಆ ದಿನಗಳಲ್ಲಿ ಭಕ್ತರ ಸಂಖ್ಯೆ ವೃದ್ಧಿಸುವ ನಿರೀಕ್ಷೆ ಇರುವ ಕಾರಣ ಬಾಣಸಿಗರ ಸಹಿತ ಸ್ವಯಂಸೇವಕರ ಸಂಖ್ಯೆಯೂ ಅಧಿಕಗೊಳ್ಳಲಿದೆ. ಇದಕ್ಕಾಗಿ ಸಕಲ ತಯಾರಿಗಳನ್ನು ಮಾಡಲಾಗಿದೆ. ಎರಡೂ ದಿನ ವಿಶೇಷ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ.

ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಆಗಮಿಸಿದ ಎಲ್ಲ ಭಕ್ತರಿಗೂ ಆ ದಿನ ಲಡ್ಡುಪ್ರಸಾದ ವಿತರಿಸುವ ಸಂಕಲ್ಪ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷವಾಗಿ ಪ್ರಸಾದರೂಪದ ಲಾಡುಗಳನ್ನು ತಯಾರಿಸುವ ಕಾರ್ಯ ಕಳೆದ ಮೂರು ದಿನಗಳಿಂದ ನಡೆಯುತ್ತಿದೆ. 10 ಮತ್ತು ೧೩ರಂದು ಆಗಮಿಸುವ ಭಕ್ತರಿಗೆ ಲಡ್ಡು ವಿಶೇಷ ಪ್ರಸಾದ ದೊರೆಯುತ್ತದೆ.  ಒಟ್ಟು 3 ಲಕ್ಷದಷ್ಟು ಲಡ್ಡುಗಳನ್ನು ತಯಾರಿಸಲಾಗುತ್ತಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.