ಶಾಲೆಗೆ ಕಟ್ಟಡ ಒದಗಿಸುವುದು ಶ್ರೇಷ್ಠವಾದ ಕಾರ್ಯ: ರಂಗನಾಥ ಭಟ್

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ವಿದ್ಯಾಭಿವರ್ದಕ ಸಂಘ ಮಾಣಿ  ಇದರ ಆಶ್ರಯದಲ್ಲಿ ಕರ್ನಾಟಕ ಪ್ರೌಢಶಾಲೆಗೆ  ಬಂಟ್ವಾಳ ರೋಟರಿ ಕ್ಲಬ್‌ನ ಸಹಕಾರದೊಂದಿಗೆ ನಿರ್ಮಾಣಗೊಂಡ ಆಂಗ್ಲಮಾಧ್ಯಮ ವಿಭಾಗದ ನೂತನ ಕೊಠಡಿಗಳ ಸಂಕೀರ್ಣದ ಉದ್ಘಾಟನಾ ಸಮಾರಂಭ ನಡೆಯಿತು.

ಜಾಹೀರಾತು

ರೋಟರಿಯ ನಿಯೋಜಿತ ಜಿಲ್ಲಾ ಗವರ್ನರ್ ರಂಗನಾಥ್ ಭಟ್ ನೂತನ ಕಟ್ಟಡಗಳ ಸಂಕೀರ್ಣವನ್ನು ಉದ್ಘಾಟಿಸಿದರು.

ಶಾಲೆಗೆ ಕಟ್ಟವನ್ನು ಒದಗಿಸಿಕೊಡುವುದು ಶ್ರೇಷ್ಠವಾದ ಕಾರ್ಯ. ವ್ಯಕ್ತಿಗೆ ವಿದ್ಯೆಯಿದ್ದರೆ ಜೀವನದಲ್ಲಿ ಏನು ಬೇಕಾದರೂ ಸಾಧಿಸಬಹುದು. ವಿದ್ಯಾರ್ಥಿಗಳು ಉತ್ತಮನಡವಳಿಕೆಯೊಂದಿಗೆ ಶಿಕ್ಷಣ ಮುನ್ನಡೆಸಿದಾಗ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ಅವರು ಈ ಸಂದರ್ಭ ತಿಳಿಸಿದರು.

ಜಾಹೀರಾತು

ಮಾಜಿ ಸಚಿವ ಬಿ.ರಮಾನಾಥ ರೈ ದೀಪ ಪ್ರಜ್ವಲಿಸಿ ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯೂ ಅಕ್ಷರ ಜ್ಞಾನಿಯಾಗಬೇಕು, ಎಲ್ಲರಿಗೂ ಮಾಲ್ಯಾಧಾರಿತ, ಗುಣಮಟ್ಟದ ಶಿಕ್ಷಣ ಸಿಗಬೇಕು. ಸಾಮಾಜಿಕ ನ್ಯಾಯದಿಂದ ವಂಚಿತರಾವರಿಗೂ ಶಿಕ್ಷಣ ನೀಡಿ ಶೋಷಣೆ ಮುಕ್ತ ಸಮಾಜ ನಿರ್ಮಾಣ ಮಾಡಬೇಕು ಎಂದರು. ವಿದ್ಯೆ ಸರ್ವಾಂಗಿಣ ಬೆಳವಣಿಗೆಗೆ  ಅವಕಾಶ ನೀಡುತ್ತದೆ ಎಂದರು.

ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ಬಂಟ್ವಾಳ ರೋಟರಿ ಕ್ಲಬ್ ಸುವರ್ಣ ವರ್ಷದ ಯೋಜನೆಯಾಗಿ ಈ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗಿದೆ. ವಿದ್ಯೆಗೆ ಮೊದಲ ಪ್ರಾಶಸ್ಯ ರೋಟರಿ ಸಂಸ್ಥೆ ನೀಡುತ್ತಿದೆ. ಅಂಗನವಾಡಿ ಸಶಕ್ತೀಕರಣ, ಶುದ್ದ ಕುಡಿಯುವ ನೀರಿನ ಯೋಜನೆ ಮೂಲಕ ಸಾಕಷ್ಟು ಅಭಿವೃದ್ದಿ ಕಾರ್ಯಕ್ರಮಗಳನ್ನು ಬಂಟ್ವಾಳ ರೋಟರಿ ಕ್ಲಬ್ ಮಾಡಿದೆ ಎಂದರು.  ಮಂಜುನಾಥ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಶಾಲೆಯ ಅಭಿವೃದ್ಧಿಗೆ ಸಹಕರಿಸಿದವರನ್ನು ಗೌರವಿಸಲಾಯಿತು.

ಜಾಹೀರಾತು

ರೋಟರಿ ಸುವರ್ಣ ವರ್ಷಾಚರಣೆ ಸಮಿತಿ ಅಧ್ಯಕ್ಷ ಡಾ. ರಮೇಶಾನಂದ ಸೋಮಾಯಾಜಿ, ಕಾರ್ಯದರ್ಶಿ ಶಿವಾನಿ ಬಾಳಿಗ,  ಹೈಕೋರ್ಟ್ ನ್ಯಾಯವಾದಿ ಸುಧಾಕರ ಪೈ ಎಂ, ಬಿಎಸ್‌ಎನ್‌ಎಲ್‌ನ ಸಹಾಯಕ ಜನರಲ್ ಮ್ಯಾನೇಜರ್ ಜನಾರ್ದನ ಪೂಜಾರಿ, ರೋಟರಿ ಕ್ಲಬ್ ಸಹಾಯಕ ಗವರ್ನರ್ ಪ್ರಕಾಶ್ ಕಾರಂತ, ವಿದ್ಯಾಭಿವರ್ಧಕ ಸಂಘದ ಕೋಶಾಧಿಕಾರಿ ಜಗನ್ನಾಥ ಚೌಟ, ಆನ್ಸ್ ಕ್ಲಬ್ ಅಧ್ಯಕ್ಷೆ ವಿದ್ಯಾ ಅಶ್ವನಿಕುಮಾರ್ ರೈ, ಗಂಗಾಧರ ರೈ, ನಿಕಟಪೂರ್ವ ಅಧ್ಯಕ್ಷ ಸಂಜೀವ ಪೂಜಾರಿ, ಮಾಜಿ ಅಧ್ಯಕ್ಷ ರಿತೇಶ್ ಬಾಳಿಗ, ಕರುಣಕರ ರೈ, ನಿಕಟಪೂರ್ವ ಕಾರ್ಯದರ್ಶಿ ಕೆ.ಎನ್ ಹೆಗ್ಡೆ ಮತ್ತಿತರ ಪ್ರಮುಖರು ಹಾಜರಿದ್ದರು.

ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಮಹಮ್ಮದ್ ಹಬೀಬ್ ವಂದಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶಾಲೆಗೆ ಕಟ್ಟಡ ಒದಗಿಸುವುದು ಶ್ರೇಷ್ಠವಾದ ಕಾರ್ಯ: ರಂಗನಾಥ ಭಟ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*