Categories: ಬಂಟ್ವಾಳ

ಜೋಡುಮಾರ್ಗ ಜೇಸಿಐ ನಿಂದ ವಿಶ್ವ ಮಹಿಳಾ ದಿನಾಚರಣೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜೇಸಿಐ ಜೋಡುಮಾರ್ಗ ನೇತ್ರಾವತಿ, ಜೇಸಿರೆಟ್ ವಿಭಾಗ ಮತ್ತು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ವಳಚ್ಚಿಲ್‌ನ ಶ್ರೀನಿವಾಸ ತಾಂತ್ರಿಕ ಕಾಲೇಜಿನ ಆವರಣದಲ್ಲಿ ನಡೆಯಿತು.

ಜಾಹೀರಾತು

ಸೈಂಟ್ ಆಗ್ನೆಸ್ ಕಾಲೇಜಿನ ಪ್ರೊಫೆಸರ್ ಡಾ| ಮಾಲಿನಿ ಹೆಬ್ಬಾರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.  ಬಿ.ಸಿ.ರೋಡಿನ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ| ಭಾರತಿ ಎಸ್. ಶೆಟ್ಟಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದರು.

ಕಾರ್‍ಯಕ್ರಮದಲ್ಲಿ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ| ಥಾಮಸ್ ಪಿಂಟೋ, ಕಾಲೇಜಿನ ಮಹಿಳಾ ವಿಭಾಗದ ಸಂಯೋಜಕಿ ಪ್ರೊ| ವೀಣಾ ಎಸ್. ರೈ ಉಪಸ್ಥಿತರಿದ್ದರು.

ಜೇಸಿರೆಟ್ ವಿಭಾಗದ ಅಧ್ಯಕ್ಷೆಯಾದ ಪ್ರೊ| ಅಮಿತಾ ಹರ್ಷರಾಜ್ ಕಾರ್‍ಯಕ್ರಮವನ್ನು ನಿರ್ವಹಿಸಿದರು.  ಕಾನೂನು ಹಾಗೂ ಮಹಿಳಾ ಹಕ್ಕುಗಳ ಜಾಗೃತಿ ವಿಷಯದಲ್ಲಿ ಆಯೋಜಿಸಿದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಬಹುಮಾನ ವಿತರಿಸಿದರು.  ಮುಖ್ಯ ಅತಿಥಿಗಳಾದ ಡಾ| ಮಾಲಿನಿ ಹೆಬ್ಬಾರ್ ಉಪನ್ಯಾಸ ನೀಡಿದರು.

ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಎಂ.ಬಿ.ಎ., ಎಂ.ಸಿ.ಎ. ವಿಭಾಗದ ಸುಮಾರು 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯರೊಂದಿಗೆ ಸಮಾಲೋಚಿಸಿ ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡರು. ವಿದ್ಯಾರ್ಥಿನಿ ಪೂರ್ವಿ ಕುಲಕರ್ಣಿಯ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್‍ಯಕ್ರಮದಲ್ಲಿ ಪ್ರೊ| ಮರಿನಾ ಚಾಂಡಿ ಅತಿಥಿಗಳನ್ನು ಸ್ವಾಗತಿಸಿದರು ಪ್ರೊ| ದೀಪ್ತಿ ಶೆಟ್ಟಿ ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.