ಲೋಕಸಭೆ ಚುನಾವಣೆ ಫಿಕ್ಸ್: ಈ ಬಾರಿ ನೀತಿಸಂಹಿತೆ ಖಡಕ್, ಸೋಶಿಯಲ್ ಮೀಡಿಯಾ ಮೇಲೆ ನಿಗಾ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಕೇಂದ್ರ ಚುನಾವಣಾ ಆಯೋಗ 17ನೇ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು ಭಾನುವಾರ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದರು. ಏಪ್ರಿಲ್ 18 ಮತ್ತು 23ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 18 ರಂದು 14 ಸ್ಥಾನ, ಏಪ್ರಿಲ್ 23ರಂದು ಉಳಿದ 14 ಸ್ಥಾನಗಳಿಗೆ ಮತದಾನ ನಡೆಯಲಿದೆ. ಚುನಾವಣಾ ಫಲಿತಾಂಶ ಮೇ 23ರಂದು ಘೋಷಣೆಯಾಗಲಿದೆ.

ಭಾನುವಾರದಿಂದಲೇ ನೀತಿ ಸಂಹಿತೆ ದೇಶದಾದ್ಯಂತ ಜಾರಿಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತದಾರರಿಗೆ ಯಾವುದೇ ರೀತಿಯ ಆಮೀಷ ಒಡ್ಡುವಂತಹ ಆಶ್ವಾಸನೆಗಳನ್ನು ನೀಡುವಂತಿಲ್ಲ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ .18 ಮತ್ತು 23ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಭಾನುವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ, ಆಯುಕ್ತರಾದ ಅಶೋಕ ಲಾವಾಸ ಮತ್ತು ಸುಶೀಲ್ ಚಂದ್ರ ಅವರುಗಳು ಪತ್ರಿಕಾಗೋಷ್ಠಿಯಲ್ಲಿ ಲೋಕಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸಿದರು.

ಲೋಕಸಭೆ ಚುನಾವಣೆಗೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಚುನಾವಣಾ ಆಯೋಗ ಈ ಬಾರಿ ಅತ್ಯಂತ ಗಂಭೀರವಾಗಿ ನೀತಿ ಸಂಹಿತೆಯನ್ನು ಜಾರಿ ಜಾರಿಯಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ಸುನೀಲ್ ಅರೋರಾ ತಿಳಿಸಿದ್ದಾರೆ.

ಉಲ್ಲಂಘಿಸಿದರೆ ಕಠಿಣ ಕ್ರಮ:

ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ.ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ಗಂಟೆವರೆಗೂ ಧ್ವನಿವರ್ದಕ ಬಳಸುವಂತಿಲ್ಲ. ಪರಿಸರ ಸ್ನೇಹಿ ಪ್ರಚಾರ ಸಾಮಾಗ್ರಿಗಲನ್ನು ಬಳಸಬೇಕು ಎಂದು ಹೇಳಿದರು.

ಮೊಬೈಲ್ನಲ್ಲಿ ದೂರು ಸಲ್ಲಿಕೆ:
ಬೆಂಗಳೂರಿನಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದ ಮೊಬೈಲ್ ಆಧಾರಿದ ದೂರು ವ್ಯವಸ್ಥೆಯನ್ನು ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಬಳಕೆ ಮಾಡಲಾಗುತ್ತಿದೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ:
ಚುನಾವಣಾ ಆಭ್ಯರ್ಥಿಗಳು ಯಾವುದೇ ರೀತಿಯ ರಾಜಕೀಯ ಜಾಹಿರಾತು ನೀಡಬೇಕಾದರೂ ಚುನಾವಣಾ ಆಯೋಗದ ಪೂರ್ವಾನುಮತಿ ಪಡೆಯಬೇಕು. ಸಾಮಾಜಿಕ ಜಾಲ ತಾಣಗಳ ಮೇಲೆ ತೀವ್ರ ನಿಗಾವಹಿಸಲಾಗುವುದು.ಫೇಸ್‍ಬುಕ್, ಟ್ವಿಟರ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಜಾಹಿರಾತುಗಳನ್ನು ಪ್ರಕಟಿಸಬೇಕಾದರೂ ಆಯೋಗದ ಪೂರ್ವಾನುಮತಿ ಪಡೆಯಬೇಕು ಎಂದು ಹೇಳಿದರು. ದ್ವೇಷದ ಭಾಷಣ ಮತ್ತು ವದಂತಿಗಳ ವಿರುದ್ಧ ಸ್ಥಳೀಯಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಪಾನ್ ನಂಬರ್ ಕಡ್ಡಾಯ:
ಈ ಬಾರಿ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ನಾಮಪತ್ರದ ಜೊತೆಗೆ ಪಾನ್ ನಂಬರ್ ಕಡ್ಡಾಯವಾಗಿ ನಮೂದಿಸಲೇಬೇಕು. ಅಲ್ಲದೇ ಫಾರಂ ನಂ.26ನ ಸಮರ್ಪಕವಾಗಿ ಭರ್ತಿ ಮಾಡಬೇಕು. ಒಂದು ವೇಳೆ ತಪ್ಪು ಮಾಹಿತಿ ನೀಡಿದರೆ ನಾಮಪತ್ರವನ್ನು ತಿರಸ್ಕರಿಸುವುದಾಗಿ ತಿಳಿಸಿದರು.

ಚುನಾವಣೆ ವಿವರ:

ದೇಶದ ಒಟ್ಟು 30 ರಾಜ್ಯ, ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಒಟ್ಟು 543 ಲೋಕ ಸಭಾ ಕ್ಷೇತ್ರಗಳಿಗೆ ಈ ಬಾರಿ 90 ಕೋಟಿ ಮತದಾರರು ಮುಂದಿನ ಐದು ವರ್ಷಗಳ ದೇಶದ ಭವಿಷ್ಯವನ್ನು ತೀರ್ಮಾನಿಸಲಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಸುಮಾರು 8.6 ಕೋಟಿ ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಇದರಲ್ಲಿ 18 ರಿಂದ 19 ವರ್ಷದೊಳಗಿನ ಸುಮಾರು 1.5 ಕೋಟಿಯಷ್ಟಿದ್ದಾರೆ.

ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಯಲು ಚುನಾವಣಾ ಆಯೋಗ ಈ ಬಾರಿ ಹಿಂದೆಂದಿಗಿಂತಲೂ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದೆ. ದೇಶಾದ್ಯಂತ ಒಟ್ಟು 10 ಲಕ್ಷ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು, ವಿಕಲಚೇತರು, ದಿವ್ಯಾಂಗರು, ಹಿರಿಯ ನಾಗರೀಕರು ಸೇರಿದಂತೆ ಮತ್ತಿತರರಿಗೆ ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಲು ವೀಲ್ ಛೇರ್ ಸೌಲಭ್ಯವನ್ನು ಒದಗಿಸಲಾಗಿದೆ.

ಅಲ್ಲದೇ ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮತ್ತಿತರ ಕನಿಷ್ಠ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ಆಯೋಗ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದೆ.

ಈ ಬಾರಿ ಮತದಾನಕ್ಕೆ ಅನುಕೂಲವಾಗಲೆಂದು ಮೊದಲ ಬಾರಿಗೆ ವಿದ್ಯುನ್ಮಾನಯಂತ್ರ(ಇವಿಎಂ)ಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರವನ್ನು ಅಳವಡಿಸಲಾಗಿದೆ. ಅಲ್ಲದೇ ಪ್ರತಿಯೊಂದು ಇವಿಎಂ ಗಳಿಗೆ ವಿವಿಪ್ಯಾಟ್ ಕೂಡಾ ಅಳವಡಿಸಲಾಗಿದ್ದು, ಮತದಾರರು ತಾವು ಯಾವ ಅಭ್ಯರ್ಥಿಗೆ ಮತ ಚಲಾಯಿಸಿದ್ದೇವೆ ಎಂಬುದನ್ನು ಖಾತರಿಪಡಿಸಿಕೊಳ್ಳಬಹುದು. ಜೊತೆಗೆ ನೋಟಾ ವ್ಯವಸ್ಥೆಯೂ ಕೂಡ ಇದೆ.

ಆಂಧ್ರ, ಅರುಣಾಚಲ ಪ್ರದೇಶ, ಗೋವಾ, ಗುಜರಾತ್, ಹರ್ಯಾಣ, ಹಿಮಾಚಲ ಪ್ರದೇಶ, ಕೇರಳ, ನಾಗಾಲ್ಯಾಂಡ್, ಮಿಜೋರಾಂ, ಪಂಜಾಬ್, ಸಿಕ್ಕಿಂ, ಕೇರಳ, ತಮಿಳುನಾಡು, ಉತ್ತರಾಖಂಡ್, ಅಂಡೋಮಾನ್ ನಿಕೋಬಾರ್, ದಾದರ್ ಅಂಡ್ ಹವೇಲಿ, ಡಿಯುಡಾಮನ್, ಲಕ್ಷದ್ವೀಪ, ದೆಹಲಿ, ಪಾಂಡಿಚೇರಿ ಮತ್ತು ಚಂಡಿಗಢದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಕರ್ನಾಟಕ, ಮಣಿಪುರ, ರಾಜಸ್ಥಾನ್, ತ್ರಿಪುರಗಳಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದೆ. ಅಸ್ಸೋಂ ಮತ್ತು ಛತ್ತೀಸ್‍ಗಢದಲ್ಲಿ 3 ಹಂತದಲ್ಲಿ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಸ್ಸಾಗಳಲ್ಲಿ 4 ಹಂತಗಳಲ್ಲಿ, ಜಮ್ಮು ಕಾಶ್ಮೀರದಲ್ಲಿ 5 ಹಂತಗಳಲ್ಲಿ, ಬಿಹಾರ್, ಉತ್ತರ ಪ್ರದೇಶ್ ಮತ್ತು ಪಶ್ಚಿಮ ಬಂಗಾಳದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಲೋಕಸಭೆ ಚುನಾವಣೆ ಫಿಕ್ಸ್: ಈ ಬಾರಿ ನೀತಿಸಂಹಿತೆ ಖಡಕ್, ಸೋಶಿಯಲ್ ಮೀಡಿಯಾ ಮೇಲೆ ನಿಗಾ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*