Categories: ಬಂಟ್ವಾಳ

ಬಸ್ ಸಂಚಾರಕ್ಕೆ ನಿರ್ಬಂಧ, ಆಟೊ ಚಾಲಕರಿಂದ ದಿಢೀರ್ ಪ್ರತಿಭಟನೆ

ಖಾಸಗಿ, ಸರಕಾರಿ ಬಸ್ ಗಳನ್ನು ಬಿ‌.ಸಿ‌.ರೋಡ್ ನ ಒಳರಸ್ತೆಗೆ ಸಂಚಾರವನ್ನು ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಬಿ.ಸಿ‌.ರೋಡ್-ಕೈಕಂಬ ಆಟೋ ರಿಕ್ಷಾ ಚಾಲಕರು ಸೋಮವಾರ ಇಲ್ಲಿನ ಮೇಲ್ಸೆತುವೆಯಲ್ಲಿ ದಿಢೀರನೆ ಪ್ರತಿಭಟನೆ ನಡೆಸಿದರು.

ಜಾಹೀರಾತು

ದಿಢೀರನೆ ಬಸ್ ಗಳ ಸಂಚಾರವನ್ನು ನಿರ್ಬಂಧಿಸಿರುವುದು ಸರಿಯಲ್ಲ. ಇದರಿಂದ ಆಟೋ ಚಾಲಕರು ತೊಂದರೆ ಅನುಭವಿಸುವಂತಾಗಿದೆ ಎಂದು ಆಟೊ ಚಾಲಕರು ದೂರಿಕೊಂಡರು.
ಬಳಿಕ ಆಟೊ‌ಚಾಲಕರು ಹೆದ್ದಾರಿ ಯಲ್ಲಿ ಬರುತ್ತಿದ್ದ ಬಸ್ ಗಳನ್ನು ತಡೆದು ನಿಲ್ಲಿಸಿ, ಬಿ.ಸಿ‌.ರೋಡಿನ ಕೆಳರಸ್ತೆಯಲ್ಲಿ ಸಂಚರಿಸುವಂತೆ ಮುಂದಾಗ ಪೊಲಿಸರು ತಡೆವೊಡ್ಡಿದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಹಾಗೂ ಬಂಟ್ವಾಳ ಕ್ರೈಂ ಎಸ್ಸೈ ಸುಧಾಕರ್ ಜಿ‌.ತೋನ್ಸೆ ಧಾವಿಸಿ, ಆಟೊ ಚಾಲಕರೊಂದಿಗೆ ಮಾತುಕತೆ ನಡೆಸಿದರು.

ಬಸ್ಗಳ ಸಂಚಾರ ನಿರ್ಬಂಧಿಸಿದಕ್ಕೆ ಆಟೊ ಚಾಲಕರು ಆಕ್ಷೇಪ ವ್ಯಕ್ತಪಡಿಸಿದಾಗ, ಬಂಟ್ವಾಳ ಎಎಸ್ಪಿ ಅವರ ನಿರ್ದೇಶನ ಮೇರೆಗೆ ಬಿ.ಸಿ.ರೋಡ್ ಒಳರಸ್ತೆಯಲ್ಲಿ ಬಸ್ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ ಎಎಸ್ಪಿ ಅವರೊಂದಿಗೆ ಮಾತುಕತೆಗೆ ತೆರಳುವಂತೆ ಹಾಗೂ ಪ್ರತಿಭಟನೆಯನ್ನು ಕೈಬಿಡುವಂತೆ ಎಸ್ಸೈ ಸುಧಾಕರ್ ಅವರು ಚಾಲಕರಿಗೆ ತಿಳಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.